ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು (Cash) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನ (Delhi High Court) ಮಾಜಿ ನ್ಯಾ.ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರನ್ನು ವಜಾಗೊಳಿಸುವಂತೆ ಮೂವರು ಹಿರಿಯ ನ್ಯಾಯಾಧೀಶರ ಸಮಿತಿ ಶಿಫಾರಸು ಮಾಡಿದೆ.
ಕಂತೆ ಕಂತೆ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ನೇಮಿಸಿದ ಸಮಿತಿಯು 55 ಸಾಕ್ಷಿಗಳನ್ನು ಸಂದರ್ಶಿಸಿ ನ್ಯಾಯಮೂರ್ತಿ ವರ್ಮಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಶಿಫಾರಸು ಮಾಡಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಇದ್ದ ಸಮಿತಿ ತನ್ನ ಅಂತಿಮ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ. ಇದನ್ನೂ ಓದಿ:ಆರ್ಸಿಬಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್
ನ್ಯಾ. ಯಶವಂತ್ ವರ್ಮಾ ಅವರ ನಿವಾಸದೊಳಗೆ ನೋಟುಗಳ ದೊಡ್ಡ ರಾಶಿ ಇರುವುದನ್ನು ಹಲವು ಮಂದಿ ನೋಡಿದ್ದಾರೆ. ಆದರೆ ವರ್ಮಾ ಅವರು ಎಂದಿಗೂ ದೂರು ದಾಖಲಿಸಿಲ್ಲ ಅಥವಾ ನ್ಯಾಯಾಂಗದ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಈ ನಡವಳಿಕೆಯನ್ನು ಅಸ್ವಾಭಾವಿಕ ಎಂದು ಕರೆದಿರುವ ಸಮಿತಿಯು ಅವರನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದೆ.
ನ್ಯಾ. ವರ್ಮಾ ಅವರ ಮಗಳು ಸೇರಿದಂತೆ 55 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಸಮಿತಿ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೋಣೆಯ ನೆಲದಾದ್ಯಂತ ಹರಡಿರುವ 500 ರೂ. ನೋಟುಗಳ ದೊಡ್ಡ ರಾಶಿಯನ್ನು ವಿಡಿಯೋ ಮತ್ತು ಫೋಟೋಗಳನ್ನು ಪರಿಶೀಲಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ನೋಡಿ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ನನ್ನ ಜೀವನದಲ್ಲಿ ಇಷ್ಟೊಂದು ಹಣವನ್ನು ನಾನು ಮೊದಲ ಬಾರಿಗೆ ನೋಡಿದ್ದೇನೆ ಎಂದು ಒಬ್ಬ ಸಾಕ್ಷಿ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ವರ್ಮಾ ಅವರು ಸಮರ್ಥನೀಯ ವಿವರಣೆಯನ್ನು ನೀಡಿಲ್ಲ. ಯಾವುದೇ ಪಿತೂರಿ ಇದ್ದರೆ ಅವರು ದೂರು ದಾಖಲಿಸಿಲ್ಲ ಯಾಕೆ? ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿಲ್ಲ ಯಾಕೆ ಎಂದು ಸಮಿತಿ ಪ್ರಶ್ನಿಸಿದೆ.
ಸಮಿತಿಯೂ ಅಂಕಿತ್ ಸೆಹ್ವಾಗ್ (ಅಗ್ನಿಶಾಮಕ ಅಧಿಕಾರಿ, ಡಿಎಫ್ಎಸ್), ಪ್ರದೀಪ್ ಕುಮಾರ್ (ಅಗ್ನಿಶಾಮಕ ಅಧಿಕಾರಿ, ಡಿಎಫ್ಎಸ್), ಮನೋಜ್ ಮೆಹ್ಲಾವತ್ (ಸ್ಟೇಷನ್ ಆಫೀಸರ್, ಡಿಎಫ್ಎಸ್), ಭನ್ವರ್ ಸಿಂಗ್ (ಚಾಲಕ, ಡಿಎಫ್ಎಸ್), ಪ್ರವೀಂದ್ರ ಮಲಿಕ್ (ಅಗ್ನಿಶಾಮಕ ಅಧಿಕಾರಿ, ಡಿಎಫ್ಎಸ್), ಸುಮನ್ ಕುಮಾರ್ (ಸಹಾಯಕ ವಿಭಾಗೀಯ ಅಧಿಕಾರಿ, ಡಿಎಫ್ಎಸ್), ರಾಜೇಶ್ ಕುಮಾರ್ (ತುಘಲಕ್ ರಸ್ತೆ ಪೊಲೀಸ್ ಠಾಣೆ) ಸುನಿಲ್ ಕುಮಾರ್ (ಐಸಿಪಿಸಿಆರ್ ಉಸ್ತುವಾರಿ), ರೂಪ್ ಚಂದ್ (ಹೆಡ್ ಕಾನ್ಸ್ಟೇಬಲ್), ಮತ್ತು ಉಮೇಶ್ ಮಲಿಕ್ (ಎಸ್ಎಚ್ಒ, ತುಘಲಕ್ ರಸ್ತೆ ಪೊಲೀಸ್ ಠಾಣೆ) ಅವರನ್ನು ವಿಚಾರಣೆ ನಡೆಸಿದೆ.