ಬಂದ್‍ಗೆ ಬೆಂಬಲವಿಲ್ಲ, ಆದ್ರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು – ಉರುಳು ಸೇವೆ ಮಾಡಿದ ಪ್ರತಿಭಟನಾಕಾರರು

Public TV
1 Min Read

ಬೆಂಗಳೂರು: ಡಾ. ಸರೋಜಿನಿ ಮಹಿಷಿಯವರ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ನಮ್ಮ ಜನಸೈನ್ಯ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಐಬಿ ಸರ್ಕಲ್‍ನಲ್ಲಿ ಜಮಾಯಿಸಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬಂದ್‍ಗೆ ವಿರೋಧ ವ್ಯಕ್ತಪಡಿಸಿ ಬಂದ್‍ನಿಂದ ಯಾವುದೇ ಪ್ರಯೋಜನವಿಲ್ಲ, ಬಂದ್ ನಿಂದ ಕೇವಲ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಅನಾನುಕೂಲ ಹೀಗಾಗಿ ಕರ್ನಾಟಕ ಬಂದ್‍ಗೆ ನಮ್ಮ ವಿರೋಧವಿದೆ. ಆದರೆ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಕೂಡಲೇ ಜಾರಿಗೆ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ನಮ್ಮ ಕರ್ನಾಟಕ ಜನಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಮಾತನಾಡಿ, ಈ ಬಂದ್ ಜನಸಾಮಾನ್ಯರಿಗೆ ಮತ್ತಷ್ಟು ಸಮಸ್ಯೆ ತಂದಿದೆ. ನಾವು ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಬೇಕು ಇಂತಹ ಬಂದ್‍ಗೆ ನಮ್ಮ ಸಂಘಟನೆಯ ವಿರೋಧ ಇದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *