ಶಾಸಕ ಬಿ.ಆರ್.ಪಾಟೀಲರಿಂದ ಧಮ್ಕಿ ಪ್ರಕರಣ- ಪತ್ರಕರ್ತರ ಸಂಘದಿಂದ ಪ್ರತಿಭಟನೆ

Public TV
1 Min Read

ಕಲಬುರಗಿ: ಪಬ್ಲಿಕ್ ಟಿವಿ ವರದಿಗಾರ ಪ್ರವೀಣ್ ರೆಡ್ಡಿ ಮೇಲೆ ಶಾಸಕ ಬಿ.ಆರ್.ಪಾಟೀಲ್ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಇಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲಬುರಗಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಬಿ.ಆರ್.ಪಾಟೀಲ್ ಮಾಧ್ಯಮಗಳಿಗೆ ನಿಂದಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ತಡೆಯಲು ಮುಂದಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿ ಸಿಂಗ್ ಠಾಕೂರ್ ಸೇರಿದಂತೆ ಶಿವರಂಜನ್ ಸತ್ಯಂಪೇಟೆ, ಪಿಟಿಐ ಜೋಶಿ, ರವಿ ನರೋಣ, ಸಿದ್ದು ಸುಬೇದಾರ, ದೇವಿಂದ್ರಪ್ಪ ಕೊಪ್ಪನೂರು ಮುಂತಾದ ಹಲವು ಪತ್ರಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬಿ.ಆರ್.ಪಾಟೀಲ್ ಅವರ ಮಾಜಿ ಆಪ್ತ ಸಹಾಯಕ ದೇವೆಂದ್ರ ಬಿರಾದಾರ ಅವರ ಕಾಮದಾಟದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಕೋಪಗೊಂಡ ಶಾಸಕರು ವರದಿಗಾರ ಪ್ರವೀಣ್ ರೆಡ್ಡಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *