ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಪ್ರಕರಣ – ಸಿಬಿಐ ತನಿಖೆಗೆ ಆಗ್ರಹಿಸಿ ಶೋಭಾ ಕರಂದ್ಲಾಜೆ ಪತ್ರ

Public TV
1 Min Read

ನವದೆಹಲಿ: ಪಿಎಸ್‌ಐ ಪರಶುರಾಮ್ (PSI Parashuram) ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವರ ಪತ್ರದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ, ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಪ್ರಕರಣವನ್ನು ಪರಿಶೀಲಿಸಿ, ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

ಈಚೆಗೆ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಪರಶುರಾಮ್‌ ಸಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ ಮತ್ತು ಅವರ ಪುತ್ರ ಪಂಪನಗೌಡ ಪುತ್ರನ ಹೆಸರು ಕೇಳಿಬಂದಿತ್ತು. ಶಾಸಕರ ರಾಜೀನಾಮೆ ಮತ್ತು ಇಬ್ಬರ ಬಂಧನಕ್ಕೆ ಆಗ್ರಹಿಸಿ ಜನರು ಪ್ರತಿಭಟಿಸಿದ್ದರು.

ಪೊಲೀಸ್‌ ಅಧಿಕಾರಿ ಪರಶುರಾಮ್‌ ಸಾವಿನ ಪ್ರಕರಣದಲ್ಲಿ ಲಂಚ ಬೇಡಿಕೆ ಮತ್ತು ಅಧಿಕಾರಿಗೆ ಮಾನಸಿಕ ಕಿರುಕುಳದ ಆರೋಪವನ್ನು ಶಾಸಕ ಚನ್ನಾರೆಡ್ಡಿ ಹೊತ್ತಿದ್ದರು. ಅವರ ರಾಜೀನಾಮೆಗೆ ಆಗ್ರಹಿಸಿ ಯಾದಗಿರಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

Share This Article