ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊನೆಗೂ ಕಾಲೇಜು ಬಳಿ ನಿಲ್ಲುತ್ತೆ ಬಸ್!

Public TV
1 Min Read

ಬೆಳಗಾವಿ/ಚಿಕ್ಕೋಡಿ: ಹುಕ್ಕೇರಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಬಸ್ಸಿಗಾಗಿ ಪರದಾಡುತ್ತಿರುವ ವರದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಬಳಿಕ ಕೆಎಸ್ಆರ್‌ಟಿಸಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ವಿದ್ಯಾರ್ಥಿಗಳ ಬಸ್ಸಿಗಾಗಿ ಪರದಾಡುತ್ತಿರುವ ವರದಿಯನ್ನು ನೋಡಿದ ಬಳಿಕ ಈಗ ಎಲ್ಲ ಬಸ್ಸುಗಳು ಕಾಲೇಜಿನ ಬಳಿ ನಿಲ್ಲಿಸಬೇಕೆಂದು ಚಾಲಕ ಮತ್ತು ನಿರ್ವಾಹಕರಿಗೆ ಸಂಕೇಶ್ವರ ವಿಭಾಗೀಯ ಅಧಿಕಾರಿ ಎಸ್ ಆರ್ ಮಾಟೋಳಿ ಮೌಖಿಕ ಆದೇಶವನ್ನು ಹೊರಡಿಸಿದ್ದಾರೆ. ಅಷ್ಟೇ ಅಲ್ಲದೇ ಬಸ್ ನಿಲುಗಡೆಗಾಗಿ ಕಾಲೇಜು ಸಮೀಪ ಟ್ರಾಫಿಕ್ ಕಂಟ್ರೋಲರ್ ಅಧಿಕಾರಿಯನ್ನು ನೇಮಿಸಿದ್ದಾರೆ. ಇದನ್ನು ಓದಿ: ವಿದ್ಯಾರ್ಥಿಗಳನ್ನು ನೋಡಿ ಬಸ್ ನಿಲ್ಲಿಸದ ಚಾಲಕರು

ಏನಿದು ಘಟನೆ?
ಬಸ್ಸಿನಲ್ಲಿ ಕಲೆಕ್ಷನ್ ಕಡಿಮೆ ಆಗುತ್ತೆ ಎನ್ನುವ ಕಾರಣಕ್ಕಾಗಿ ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಚಾಲಕರು ನೂರಾರು ಬಾರಿ ಯೋಚನೆ ಮಾಡುತ್ತಿದ್ದರು. ಕಾಲೇಜು ಮುಂಭಾಗದಲ್ಲಿ ನಿಲ್ದಾಣಕ್ಕೆ ಅನುಮತಿ ನೀಡಲಾಗಿದ್ದರೂ, ಬಸ್ ನಿಲ್ಲಿಸುತ್ತಿರಲಿಲ್ಲ. ಇದರಿಂದ ನಿಲ್ಲುವ ಬಸ್ಸಿಗಾಗಿ ದಿನನಿತ್ಯ ಕಾಲೇಜು ಮುಗಿದ ಮೇಲೆ ಮೂರರಿಂದ ನಾಲ್ಕು ಗಂಟೆ ವಿದ್ಯಾರ್ಥಿಗಳು ಕಾಯಬೇಕಿತ್ತು. ಇದನ್ನು ಓದಿ:  ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ್ದಕ್ಕೆ ಬಸ್ ಚೇಸ್ ಮಾಡಿ ಸಿಬ್ಬಂದಿಗೆ ಅಂಜಲಿ ನಿಂಬಾಳ್ಕರ್ ಕ್ಲಾಸ್!

ಬಸ್ ಬಂದರೆ ಅದರಲ್ಲಿ ಕುರಿ ತುಂಬಿದ ಹಾಗೆ ವಿದ್ಯಾರ್ಥಿಗಳನ್ನು ತುಂಬುತ್ತಿದ್ದರು. ವಿದ್ಯಾರ್ಥಿಗಳು ಹತ್ತುತ್ತಿರುವಾಗಲೇ ಚಾಲಕರು ಬಸ್ ಚಾಲನೆ ಮಾಡುತ್ತಿದ್ದರು. ಇದರಿಂದಾಗಿ ಹಲವು ವಿದ್ಯಾರ್ಥಿಗಳು ಈ ಹಿಂದೆ ಗಾಯಗೊಂಡಿದ್ದರು.

ಈ ಕಾಲೇಜು ಸಮೀಪ ಯಾವುದೇ ಬಸ್ ತಂಗುದಾಣ ಇಲ್ಲದೇ ಇರುವ ಕಾರಣ ವಿದ್ಯಾರ್ಥಿಗಳು ರಸ್ತೆ ಬದಿಯೇ ನಿಂತು ಕಾಲ ಕಳೆಯುತ್ತಿದ್ದರು. ಸಾಕಷ್ಟು ಬಾರಿ ದೂರು ನೀಡಿದರೂ ಸಮಸ್ಯೆ ಪರಿಹಾರವಾಗಿರಲಿಲ್ಲ. ಈ ಹಿನ್ನೆಯಲ್ಲಿ ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *