ಮೋರಿ ಸ್ವಚ್ಛ ಮಾಡಿ ಜನರಲ್ಲಿ ಜಾಗೃತಿ- ಸಿಎಂ ವಿಡಿಯೋ ವೈರಲ್

Public TV
1 Min Read

ನವದೆಹಲಿ: ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಮೋರಿಯನ್ನು ಸ್ವಚ್ಛಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಹಾಯ್ ಸೇವಾ ಯೋಜನೆಗೆ ಕಳೆದ ತಿಂಗಳು ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.

ಈ ವಿಡಿಯೋದಲ್ಲಿ ಪುದುಚೇರಿಯ ಮುಖ್ಯಮಂತ್ರಿ ಬಿಳಿ ಬಟ್ಟೆ ಮತ್ತು ಪಂಚೆಯನ್ನು ತೊಟ್ಟಿದ್ದು, ರಸ್ತೆಯ ಬದಿಯಿದ್ದ ಮೋರಿಯಲ್ಲಿರುವ ಕೊಳೆ ನೀರನ್ನು ಸಲ್ಕೆಯಿಂದ ಹೊರತೆಗೆಯುವ ಮೂಲಕ ಜನರಲ್ಲಿ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಮೂಡಿಸಿದರು.

ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಮತ್ತು ಸಮರ್ಪಿತ ಪ್ರಯತ್ನಗಳನ್ನು ನೋಡಿದಾಗ ನಿಜವಾಗಿಯೂ ಸಂತೋಷವಾಗಿದೆ. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೀವು ಮಾದರಿಯಾಗಿದ್ದೀರಿ. ನಮ್ಮ ದೇಶಕ್ಕೆ ಹೆಚ್ಚು ಸೇವೆ ನೀಡಲು ದೇವರು ನಿಮಗೆ ಹೆಚ್ಚಿನ ಶಕ್ತಿ ನೀಡಲಿ ಎಂದು ಟ್ವಿಟರ್‌ನಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಬರೆದುಕೊಂಡಿದ್ದರು.

ಕಳೆದ ನಾಲ್ಕು ವರ್ಷಗಳಲ್ಲಿ ಒಂಬತ್ತು ಕೋಟಿ ಶೌಚಾಲಯಗಳನ್ನು ಕಟ್ಟಲಾಗಿದೆ ಮತ್ತು 4.5 ಲಕ್ಷಕ್ಕಿಂತ ಹೆಚ್ಚು ಹಳ್ಳಿಗಳನ್ನು ತೆರೆದ ಮಲವಿಸರ್ಜನೆ ಮುಕ್ತ ಮಾಡಲಾಗಿದೆ ಎಂದು ಘೋಷಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *