ಅಪ್ಪು ಸಾವಿನಿಂದ ಮನನೊಂದು ಅಭಿಮಾನಿಗಳಿಬ್ಬರು ಆತ್ಮಹತ್ಯೆಗೆ ಯತ್ನ!

Public TV
1 Min Read

ರಾಯಚೂರು: ಪುನೀತ್ ರಾಜಕುಮಾರ ಹಠಾತ್ ನಿಧನರಾದ ಹಿನ್ನೆಲೆ ಜಿಲ್ಲೆಯ ಅಭಿಮಾನಿಗಳಿಬ್ಬರು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

PUNEET RAJKUMAR

ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಯುವಕ ಬಸನಗೌಡ ಹಾಗೂ ಯಾಪಲಪರ್ವಿ ಗ್ರಾಮದ ಯುವಕ ಮಹಮ್ಮದ್ ರಫಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ತಂದೆ ಡಾ. ರಾಜ್ ಬಗ್ಗೆ ಪುಸ್ತಕ ಬರೆದಿದ್ದ ಅಪ್ಪು

ಪುನೀತ್ ರಾಜಕುಮಾರ್ ನಿಧನ ಹೊಂದಿದ ಸುದ್ದಿ ಕೇಳಿ ತಮ್ಮ ಮನೆಗಳಲ್ಲೇ ವಿಷ ಸೇವನೆ ಮಾಡಿದ್ದಾನೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್

PUNEET

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳಾಗಿದ್ದ ಹಿನ್ನೆಲೆ ದುಃಖ ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಭಿಮಾನಿಗಳಿಬ್ಬರು ಚಿಕಿತ್ಸೆಗೆ ಸ್ಪಂದಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *