ಪುನೀತ್ ನಿಧನದ ಆಘಾತಕ್ಕೆ ಅಭಿಮಾನಿ ಸಾವು

Public TV
1 Min Read

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿ ಊಟ ಸೇವಿಸದೇ ಪ್ರಾಣಬಿಟ್ಟಿದ್ದಾರೆ. ಈ ಘಟನೆ ಮಂಡ್ಯ ತಾಲೂಕಿ ಕೆರಗೋಡು ಗ್ರಾಮದಲ್ಲಿ ನಡೆದಿದೆ.

ಕೆ.ಎಂ.ರಾಜೇಶ್ (50) ಮೃತ ಅಭಿಮಾನಿಯಾಗಿದ್ದಾರೆ. ಈತ ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ನಿವಾಸಿಯಾಗಿದ್ದಾರೆ. ಪುನೀತ್ ನಿಧನದ ಸುದ್ದಿ ತಿಳಿದ ಬಳಿಕ ಸರಿಯಾಗಿ ಊಟ ಸೇವಿಸದೇ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

ನಿನ್ನೆ ಅಂತಿಮ ದರ್ಶನಕ್ಕೆ ಹೋಗುವುದಾಗಿ ಮನೆ ಬಿಟ್ಟಿದ್ದನು. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಸುಸ್ತಾಗಿ ಬಿದ್ದಿದ್ದರು. ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ ಅಸ್ವಸ್ಥನಾಗಿದ್ದನು. ಸಂಜೆ ಪರಿಚಯಸ್ಥರು ನೋಡಿ ಮನೆಗೆ ಕರೆದುಕೊಂಡು ಹೋಗಿ ವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಿದ್ದರು. ಮಧ್ಯ ರಾತ್ರಿ 12 ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿಕೆ ಬಗ್ಗೆ ಶಿವಣ್ಣ ಸುದೀಪ್‍ಗೆ ಹೇಳಿದ್ದೇನು?

ಡಾ.ರಾಜ್ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದ ರಾಜೇಶ್, ಡಾ.ರಾಜ್ ಕುಮಾರ್ ಎಂದು ಹೆಸರಿಟ್ಟು ಹೋಟೆಲ್ ನಡೆಸುತ್ತಿದ್ದನು. ಮಂಡ್ಯದಲ್ಲಿ ಅಪ್ಪು ಇಬ್ಬರು ಅಭಿಮಾನಿಗಳು ಸಾವನ್ನಪಿದ್ದಾರೆ. ನಿನ್ನೆ ಮದ್ದೂರು ತಾಲೂಕಿನ ಯಲಾದಹಳ್ಳಿ ಗ್ರಾಮದ ವೈ.ಎಸ್.ಸುರೇಶ್ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

Share This Article
Leave a Comment

Leave a Reply

Your email address will not be published. Required fields are marked *