ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾಗೆ ಭರ್ಜರಿ ಸ್ವಾಗತ ದೊರೆತಿದೆ. ಆದರೆ ಅಭಿಮಾನಿಯೊಬ್ಬ ಪುನೀತ್ ಅವರ ಪೋಸ್ಟರ್‌ಗೆ ಬಿಯರ್ ಅಭಿಷೇಕ ಮಾಡಿ ವಿಕೃತಿ ಮೆರೆದಿದ್ದಾರೆ.

ಈ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪ್ರತಿಕ್ರಿಯಿಸಿ, “ಆ ರೀತಿ ಮಾಡುವುದು ಬೇಡ. ಸಿನಿಮಾದಲ್ಲಿ ನಾವು ಏನೇನೋ ಮಾಡುತ್ತೇವೆ. ನಾವು ಚಿತ್ರದಲ್ಲಿ ಕೊಲೆ ಮಾಡುತ್ತೇವೆ. ಹಾಗಂತ ನೀವು ನಿಜಜೀವನದಲ್ಲಿ ಕೊಲೆ ಮಾಡಿ ಎಂದು ಹೇಳುವುದಿಲ್ಲ. ಇದು ಕೇವಲ ಒಂದು ಹಾಡು ಅಷ್ಟೇ. ಆ ಹಾಡಿನಲ್ಲಿ ಒಂದು ಥ್ರಿಲ್ ಇದೆ. ಸಮಾಜಕ್ಕೆ ಸಂದೇಶ ನೀಡುವ ಕೆಲವು ಸಿನಿಮಾದಲ್ಲಿ ಇರುತ್ತದೆ. ಅದನ್ನು ಉಪಯೋಗಿಸಿ. ಹಾಗಂತ ಬಿಯರ್ ಉಪಯೋಗಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *