ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ

Public TV
2 Min Read

– ಗೊತ್ತಿಲ್ಲದೆ ತಪ್ಪಾಗಿದ್ದಕ್ಕೆ ಕ್ಷಮೆಯಿರಲಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಮಾಚರಣೆ ಮಾಡಿದೆ ಎನ್ನುವ ಕುರಿತಾಗಿ ನಿರ್ದೇಶಕ ಪ್ರೇಮ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಗೊತ್ತಿದ್ದು ತಪ್ಪು ಮಾಡಿಲ್ಲ. ಬದಲಾಗಿ ನನಗೆ ಗೊತ್ತಾಗದೇ ಯಾವುದೇ ತಪ್ಪನ್ನು ಮಾಡಿದ್ದರೆ ಕ್ಷಮಿಸಿ. ಅಪ್ಪು ಅವರನ್ನು ಕಳೆದುಕೊಂಡ ಮೇಲೆ ಇನ್ನೊಬ್ಬರಿಗೆ ಸ್ಫೂರ್ತಿಯಾಗಿ ಬದುಕೋಣ, ಇನ್ನೊಬ್ಬರ ಕಾಲು ಎಳೆಯುವುದು ಬೇಡ, ಸಾಧ್ಯವಾದಷ್ಟು ಸಹಾಯ ಮಾಡೋಣ ಎನ್ನುವ ದೃಷ್ಟಿಯಿಂದ ನಿನ್ನೆ ಕಾರ್ಯಕ್ರಮದ ಅಂತ್ಯದಲ್ಲಿ ನನಗೆ ಗೊತ್ತಿಲ್ಲದೇ ತಪ್ಪು, ನೋವು ಆಗಿದ್ದರೆ ಕ್ಷಮಿಸಿ ಎಂದು ನಾನು ಕೇಳಿದ್ದೇನು ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!

ಅಪ್ಪು ಅವರು ಆಸ್ಪತ್ರೆಯಲ್ಲಿ ಮಲಗಿದ್ದರು. ಆಗ ನಾನು ಅವರ ಎರಡೂ ಕಾಲು ಹಿಡಿದುಕೊಂಡು ನನ್ನಿಂದ ಏನಾದರೂ ತಪ್ಪು ಆಗಿದ್ದರೆ ಕ್ಷಮಿಸಿ ಬಾಸ್ ಎಂದು ಕೇಳಿಕೊಂಡಿದ್ದೆ. ಅಪ್ಪು ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದಿದ್ದೇನೆ. ನನ್ನನ್ನು ಕ್ಷಮಿಸಿ. ನನಗೆ ಗೊತ್ತಾಗದೇ ಏನಾದ್ರೂ ಆಗಿದ್ದರೆ ಕ್ಷಮಿಸಿ. ನಿನ್ನೆ ನಮಗೆ ಗೊತ್ತಿಲ್ಲದೆ ತಪ್ಪು ಆಗಿದೆ. ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:  ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ

ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

Share This Article
Leave a Comment

Leave a Reply

Your email address will not be published. Required fields are marked *