ಅಭಿಮಾನಿಯ ಕೊನೆ ಆಸೆ ಈಡೇರಿಸಿ ಮಾನವೀಯತೆ ಮೆರೆದ ಪವರ್ ಸ್ಟಾರ್

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮ ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ಶ್ರೀನಿವಾಸನಗರದ ನಿವಾಸಿ ಪ್ರೀತಿಯನ್ನು ಅಪ್ಪು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ. ಪ್ರೀತಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗೆ ತೆರಳಿ ಅಭಿಮಾನಿ ಪ್ರೀತಿ ಜೊತೆ ಪುನೀತ್ ಕೇಕ್ ಕಟ್ ಮಾಡಿದ್ದಾರೆ. ತಮ್ಮ ಕೈಯಿಂದಲೇ ಪ್ರೀತಿಗೆ ಕೇಕ್ ತಿನ್ನಿಸುವ ಮೂಲಕ ಅಭಿಮಾನಿಯ ಕನಸನ್ನು ನನಸು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಅವರ ನಿಶ್ಚಿತಾರ್ಥಕ್ಕೆ ಬಳ್ಳಾರಿಗೆ ತರೆಳಿದ್ದ ಪುನೀತ್, ಹೊಸಪೇಟೆಯಲ್ಲಿರುವ ಅಭಿಮಾನಿ ಕಿಚಡಿ ವಿಶ್ವ ಎಂಬವರ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

ಕಿಚ್ಚ ಸುದೀಪ್ ಕೂಡ ಇತ್ತೀಚೆಗೆ ಅಭಿಮಾನಿ ವಿನುತಾರ ಕೊನೆ ಆಸೆಯಂತೆ ಆಸ್ಪತ್ರೆಗೆ ತೆರಳಿ ಭೇಟಿ ಮಾಡಿದ್ದರು. ವಿನುತಾ ಕ್ಯಾನ್ಸರ್‍ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ಉಲ್ಬಣಗೊಂಡು ನಾಲ್ಕನೆಯ ಹಂತ ತಲುಪಿದೆ. ವೈದ್ಯರು ವಿನುತಾ ಬದುಕುಳಿಯುವ ಸಾಧ್ಯತೆ ತುಂಬಾ ಕಡಿಮೆ ಎಂದು ತಿಳಿಸಿದ್ದಾರೆ. ಸಾವಿನಂಚಿನಲ್ಲಿರುವ ವಿನುತಾ ಸುದೀಪ್ ಅವರ ದೊಡ್ಡ ಅಭಿಮಾನಿ. ಅವರ ಕೊನೆಯ ಆಸೆ ಏನು ಎಂದು ಕೇಳಿದಾಗ, ಒಮ್ಮೆ ತಮ್ಮ ಮೆಚ್ಚಿನ ನಟನನ್ನು ನೋಡಬೇಕು ಎಂಬ ಆಸೆಯನ್ನು ಹೇಳಿಕೊಂಡಿದ್ದಾರೆ. ವಿನುತಾರ ಕೊನೆಯ ಆಸೆಯ ಬಗ್ಗೆ ಕಿಚ್ಚಾ ಸುದೀಪ್ ಸೇನಾ ಸಮಿತಿಯು ನಟ ಸುದೀಪ್ ಅವರಿಗೆ ಹೇಳಿತ್ತು. ವಿಷಯ ತಿಳಿದ ನಂತರ ಸುದೀಪ್ ವಿನುತಾ ಕೊನೆಯಾಸೆಯಂತೆ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಮಾತನಾಡುತ್ತಾ ಸಮಯ ಕಳೆದಿದ್ದರು.

https://www.youtube.com/watch?v=JjUkzuFGupw

+

Share This Article
Leave a Comment

Leave a Reply

Your email address will not be published. Required fields are marked *