‘ಪುಷ್ಪ’ (Pushpa) ಅಥವಾ ನನ್ನ ಇತರೆ ಸಿನಿಮಾಗಳ ಚಿತ್ರಕಥೆ ಚೆನ್ನಾಗಿದೆ ಎಂದರೆ ಅದಕ್ಕೆ ಉಪೇಂದ್ರ (Upendra) ಸಿನಿಮಾಗಳೇ ಸ್ಫೂರ್ತಿ ಎಂದು ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ (Sukumar) ಕೊಂಡಾಡಿದ್ದಾರೆ. ಇದನ್ನೂ ಓದಿ:2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಇಲಿಯಾನಾ
ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣಂ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಸುಕುಮಾರ್ ಮತ್ತು ಉಪೇಂದ್ರ ಅತಿಥಿಗಳಾಗಿ ಭಾಗಿಯಾಗಿದ್ದರು. ಈ ವೇಳೆ ಸುಕುಮಾರ್ ಮಾತನಾಡಿ, ಉಪೇಂದ್ರ ಅವರು ತಮ್ಮ ಚಿತ್ರಗಳಲ್ಲಿ ತರುವ ಮ್ಯಾಡ್ನೆಸ್ ಅನ್ನು ನಾನು ಯಾವುದೇ ನಿರ್ದೇಶಕರಲ್ಲಿ ನೋಡಿಲ್ಲ. ನಾನು ಕೂಡ ಅವರಂತೆ ನಿರ್ದೇಶಿಸಿದ್ದರೆ ಖುಷಿಯಿಂದ ನಿವೃತ್ತಿ ಹೊಂದುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
‘ಪುಷ್ಪ’ ಅಥವಾ ನನ್ನ ಇತರೆ ಸಿನಿಮಾಗಳ ಚಿತ್ರಕಥೆ ಚೆನ್ನಾಗಿದೆ ಎಂದರೆ ಅದಕ್ಕೆ ಉಪ್ಪಿ ಸಿನಿಮಾಗಳೇ ಪ್ರೇರಣೆ. ಅದನ್ನು ಯಾವುದೇ ಸಂಕೋಚವಿಲ್ಲದೇ ಹೇಳುತ್ತೇನೆ ಎಂದು ಉಪೇಂದ್ರ ಕುರಿತು ಸುಕುಮಾರ್ ಹೊಗಳಿದ್ದಾರೆ. ನಿರ್ದೇಶಕನ ಮಾತು ಉಪ್ಪಿ ಫ್ಯಾನ್ಸ್ಗೆ ಖುಷಿ ಕೊಟ್ಟಿದೆ.
ತೆಲುಗಿನ ಆಂಧ್ರ ಕಿಂಗ್ ತಾಲೂಕಾ, ಭಾರ್ಗವ, 45 ಸಿನಿಮಾ, ಕೂಲಿ ಸೇರಿದಂತೆ ಹಲವು ಚಿತ್ರಗಳು ಉಪೇಂದ್ರ ಕೈಯಲ್ಲಿವೆ.