ಬೃಹದಾಕಾರದ ಹೆಬ್ಬಾವು ಪ್ರತ್ಯಕ್ಷ – ಬೆಚ್ಚಿಬಿದ್ದ ಗ್ರಾಮಸ್ಥರು – ವಿಡಿಯೋ ನೋಡಿ

Public TV
1 Min Read

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ನಿಟ್ಟೂರು ಕೊಡಿಹಳ್ಳಿಯಲ್ಲಿ ಬೃಹದಾಕಾರದ ಹೆಬ್ಬಾವು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

ಗ್ರಾಮದ ಇಗ್ಗಲೂರು ನಾಲೆಯ ಬಳಿ ಹೆಬ್ಬಾವು ಇರುವುದನ್ನು ನೋಡಿದ ಗ್ರಾಮಸ್ಥರು ಗಾಬರಿಯಾಗಿ ತಕ್ಷಣ ಅರಣ್ಯ ಇಲಾಖೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದಿದ್ದು, ರಾತ್ರಿಯಲ್ಲೇ ಹೆಬ್ಬಾವನ್ನ ರಕ್ಷಿಸಿ ಹತ್ತಿರದ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬೃಹತ್ ಆಕಾರದ ಹೆಬ್ಬಾವು ಪ್ರತ್ಯಕ್ಷವಾದ ವಿಚಾರ ಗೊತ್ತಾಗುತ್ತಿದಂತೆ ಹೆಬ್ಬಾವನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು.

https://www.youtube.com/watch?v=F38FT-K7k5U

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *