ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

Public TV
1 Min Read

ಚಿಕ್ಕೋಡಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ನಡೆದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಹುಸೇನ್ ಸಾಬ್ ದಸ್ತಗಿರ ಪರೀಟ್ (25) ಕೊಲೆಯಾದ ದುರ್ದೈವಿ. ಇಮ್ತಿಯಾಜ್ ಶೇಗಡಿ (25) ಕೊಲೆ ಮಾಡಿರುವ ಆರೋಪಿ. ಇದನ್ನೂ ಓದಿ: ಬಿಹಾರ | ಕನ್ವರ್‌ ಯಾತ್ರಾರ್ಥಿಗಳಿದ್ದ ವ್ಯಾನ್ ಕಂದಕಕ್ಕೆ ಪಲ್ಟಿ – ಐವರ ದುರ್ಮರಣ

ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಯಮಕನಮರಡಿ ಗ್ರಾಮದ ನಿವಾಸಿಗಳಾದ ಹುಸೇನ್ ಸಾಬ್ ಪರೀಟ್ ಹಾಗೂ ಸ್ನೇಹಿತ ಇಮ್ತಿಯಾಜ್ ಇಬ್ಬರು ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಇದನ್ನೂ ಓದಿ: ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ

ಮಹಾರಾಷ್ಟ್ರದ ಸಾಂಗಲಿ ನಗರಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕೋಪಗೊಂಡ ಇಮ್ತಿಯಾಜ್ ಕಟ್ಟಿಗೆಯಿಂದ ಹುಸೇನ್ ಸಾಬ್ ತಲೆಗೆ ಹೊಡೆದ ಪರಿಣಾಮ ಹುಸೇನ್ ಸಾಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article