ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್‌ ಅಶೋಕ್‌

Public TV
1 Min Read

ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ(Socio Economic Survey) ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಭಾಗವಹಿಸಿದ್ದಾರೆ.

ಶನಿವಾರ ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಗೊಳಿಸಿಲ್ಲ. ಇದನ್ನೂ ಓದಿ:  ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

 

ಒಕ್ಕಲಿಗ(Vokkliga) ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್‌ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಈ ಹಿಂದೆ ಭಾಗವಹಿಸಿದ್ದರು. ಇದನ್ನೂ ಓದಿ:  ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ಈ ಸಭೆಯಲ್ಲಿ ಜಾತಿಗಳಿಗೆ ಕ್ರಿಶ್ಚಿಯನ್ ಸೇರಿಸಿರುವುದನ್ನ ಕೈ ಬಿಡಬೇಕು. ಸಮುದಾಯದ ಎಲ್ಲರೂ ಒಕ್ಕಲಿಗ ಎಂದೇ ಜಾತಿ ಬರೆಸಬೇಕು ಎಂಬ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.
Share This Article