ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ: ಅಶೋಕ್

By
1 Min Read

ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 287 ಕೋಟಿ ರೂ.ಗಳ ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಡುತ್ತೇವೆ. ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಈ ಕಾರ್ಯ ಸದ್ಯದಲ್ಲೇ ಪ್ರಾರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.

ಕಂದಾಯ ಇಲಾಖೆಯ ಕಾರ್ಯಕ್ರಮದ ಕುರಿತು ಮಾತನಾಡಿ, ಇನಾಂತಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರು ಅರ್ಜಿ ಹಾಕಿಕೊಳ್ಳಲು ಇನ್ನೂ ಒಂದು ವರ್ಷ ಅವಕಾಶ ಮಾಡಿಕೊಟ್ಟಿದ್ದೇನೆ. ಆ ಕುರಿತು ಗೆಜೆಟ್ ನೋಟಿಫಿಕೇಷನ್ ಆಗಿದೆ ಎಂದರು. ಇದನ್ನೂ ಓದಿ: ರೇಣುಕಾಚಾರ್ಯ, ಯತ್ನಾಳ್ ಭೇಟಿ – ಸಚಿವ ಸ್ಥಾನದ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಮನೆಯ ಮುಂದೆ ಕಾಂಗ್ರೆಸ್ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಯಾರಿಗೂ ಪ್ರತಿಭಟನೆ ಮಾಡುವುದಕ್ಕೇ ಬಿಡುತ್ತಿರಲಿಲ್ಲ. ನಮ್ಮದು ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡುವ ಸರ್ಕಾರ. ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡುವುದಾದರೆ ಸ್ವಾಗತ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

ಮಹದಾಯಿ ಯೋಜನೆಗೆ ಪ್ರತಿಭಟನೆ ನಡೆಸಿದವರ ಮೇಲೆ ಲಾಟಿ ಚಾರ್ಜ್ ಮಾಡಿಸಿದ್ದವರು ಕಾಂಗ್ರೆಸ್ ನಾಯಕರು. ಪಾದಯಾತ್ರೆಯ ಮೂಲಕ ಇಡೀ ರಾಜ್ಯಕ್ಕೆ ಕೋವಿಡ್ ಸ್ಫೋಟಕ್ಕೆ ಕಾರಣರಾದರು. ಕಾಂಗ್ರೆಸ್‍ನವರು ಪಾದಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಯಾರೂ ಕೋವಿಡ್ ಟೆಸ್ಟ್ ಮಾಡಿಸಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಪರೀಕ್ಷೆ ಮಾಡಿದರೆ, ಪಾದಯಾತ್ರೆಯಲ್ಲಿ ಭಾಗವಹಿಸಿದ ಐದಾರು ಸಾವಿರ ಜನರಿಗೆ ಪಾಸಿಟಿವ್ ಬರುತ್ತಿತ್ತು ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *