ಒಂದು ಕಡೆ ಸಿನಿಮಾ, ಮತ್ತೊಂದು ಕಡೆ ರಾಜ್ಯ ಏನ್ಮಾಡ್ಬೇಕು ಗೊತ್ತಾಗ್ತಿಲ್ಲ: ರಚಿತಾ ರಾಮ್

Public TV
1 Min Read

ಶಿವಮೊಗ್ಗ: ಒಂದು ಕಡೆ ಸಿನಿಮಾ ಮತ್ತೊಂದು ಕಡೆ ರಾಜ್ಯ ಏನು ಮಾಡಬೇಕೆಂದು ಗೊತ್ತಾಗುತ್ತಿಲ್ಲ ಎಂದು ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಹೇಳಿದ್ದಾರೆ.

ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸ ವರ್ಷಕ್ಕೆ ಇನ್ನೇನು ಕೌಂಟ್‍ಡೌನ್ ಸ್ಟಾರ್ಟ್ ಆಗಿದೆ. ಈ ನಡುವೆ ಜನ ಹೊಸ ವರ್ಷಾಚರಣೆಗೆ ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಘೋಷಿಸಿದೆ. ಇದನ್ನೂ ಓದಿ: 56ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸುಲ್ತಾನ್ – ಫಾರ್ಮ್ ಹೌಸ್‍ನಲ್ಲಿ ಪಾರ್ಟಿ

ಈ ಮಧ್ಯೆ ಶಿವಮೊಗ್ಗದಲ್ಲಿ ತಮ್ಮ ಹೊಸ ಚಿತ್ರ ಏಕ್ ಲವ್ ಯಾ ಸಾಂಗ್ ಇವೆಂಟ್ ವೇಳೆ ಮಾತನಾಡಿದ ರಚಿತಾ ರಾಮ್, ಡಿಸೆಂಬರ್31 ರಂದು ನನ್ನ ಸಿನಿಮಾ ಲವ್ ಯೂ ರಚ್ಚು ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕಾಗಿ ನಮ್ಮ ನಿರ್ಮಾಪಕರು ತುಂಬ ಫೈಟ್ ಮಾಡುತ್ತಿದ್ದಾರೆ. ನಿರ್ಮಾಪಕರು ಒಂದು ಸಿನಿಮಾ ಮಾಡಲು ಎಲ್ಲೆಲ್ಲಿಂದಲೋ ದುಡ್ಡು ತಂದು ಕಷ್ಟ ಪಟ್ಟು ಇಷ್ಟ ಪಟ್ಟು ಸಿನಿಮಾ ಮಾಡಿರುತ್ತಾರೆ. ಆದರೆ ಈ ನಡುವೆ ನೈಟ್ ಕರ್ಫ್ಯೂ, ಬಂದ್ ಮಾಡುವುದರಿಂದ ತೊಂದರೆಯಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

ಒಂದು ಕಡೆ ನಮ್ಮ ರಾಜ್ಯಕೋಸ್ಕರ ಸಪೋರ್ಟ್ ಮಾಡುತ್ತಾ ನಿಲ್ಲಬೇಕಾಗುತ್ತದೆ. ಇನ್ನೊಂದು ಕಡೆ ಸಿನಿಮಾ. ಹೀಗಾಗಿ ಏನು ಹೇಳಬೇಕು ಅಂತಾ ಗೊತ್ತಾಗುತ್ತಿಲಲ್ಲ. ಒಂದು ಕಡೆ ನಮ್ಮ ಪ್ರೊಡ್ಯೂಸರ್, ಇನ್ನೊಂದು ಕಡೆ ನಮ್ಮ ರಾಜ್ಯ. ಸಪೋರ್ಟ್ ಎರಡು ಕಡೆಯೂ ಇರುತ್ತದೆ. ಆದರೆ ಹೆಚ್ಚು ಸಪೋರ್ಟ್ ನಮ್ಮ ರಾಜ್ಯಕೋಸ್ಕರ ಇರುತ್ತದೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *