ನಿನ್ನಿಂದಲೇ ನಾನು ಹುಷಾರಾಗಿದ್ದು, ನಿನ್ನ ಹಾರೈಕೆಯಿಂದಲೇ ಹೊಸ ಚೈತನ್ಯ ಸಿಕ್ಕಿದ್ದು: ರಾಘಣ್ಣ

Public TV
1 Min Read

ಬೆಂಗಳೂರು: ನಿನ್ನಿಂದಲೇ ನಾನು ಹುಷಾರಾಗಿದ್ದು, ನಿನ್ನ ಹಾರೈಕೆಯಿಂದಲೇ ಹೊಸ ಚೈತನ್ಯ ಸಿಕ್ಕಿದ್ದು ಎಂದು ನಟ ರಾಘವೇಂದ್ರ ರಾಜ್‍ಕುಮಾರ್ ಪ್ರೀತಿಯ ಸಹೋದರ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ದಿನಗಳೇ ಕಳೆದರೂ ಅಭಿಮಾನಿಗಳಿಗೆ ಇಂದಿಗೂ ಪುನೀತ್ ಇಲ್ಲ ಎಂಬುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇನ್ನೂ ಅಪ್ಪು ಕುಟುಂಬದವರ ದುಃಖ ಹೇಳತಿರದ್ದಾಗಿದೆ. ಇದನ್ನೂ ಓದಿ: ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್

ಪುನೀತ್ ನಿಧನ ಹೊಂದಿದಾಗಲಿಂದಲೂ ತಮ್ಮನನ್ನು ಕಳೆದುಕೊಂದು ದುಃಖದಲ್ಲಿರುವ ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಪ್ಪುವಿನ ಹಲವಾರು ಫೋಟೋಗಳನ್ನು ಪ್ರತಿನಿತ್ಯ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಪ್ಪು ಫೋಟೋ ಜೊತೆಗೆ ತಾವು ನಟಿಸುತ್ತಿರುವ ಕರ್ನಾಟಕದ ಅಳಿಯ ಎಂಬ ಹೊಸ ಸಿನಿಮಾ ಕುರಿತಂತೆ ಪೋಸ್ಟ್‍ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

 

ನಿನ್ನಿಂದಲೇ ನಾನು ಹುಷಾರಾಗಿದ್ದು, ನಿನ್ನ ಆರೈಕೆಯಿಂದಲೇ ಹೊಸಚೈತನ್ಯ ಸಿಕ್ಕಿದು, ನಿನ್ನ ಸಹಕಾರದಿಂದಲೇ ಮತ್ತೆ ಸಿನಿಮಾ ಮಾಡ್ತಾ ಇರೋದು, ನೀನೇ ಈ ಸಿನಿಮಾ ಕಥೆ- ಟೈಟಲ್ ಬಹಳ ಮೆಚ್ಚಿದ್ದು, ಈಗ ನೀನೇ ಹೇಳದೇ ಕೇಳದೇ ನಮ್ಮನ್ನ ಬಿಟ್ಟುಹೋಗಿರೋದು.. ಈ ಸಿನಿಮಾ ನಿನಗೆ ಅರ್ಪಣೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ನೀನು ನನ್ನ ಮಗ ಎಂದು ಹೇಳಲು ಹೆಮ್ಮೆ ಪಡುತ್ತೇನೆ: ಬಿಗ್ ಬಿ

ಈ ಸಿನಿಮಾಗೆ ನಿರ್ದೇಶಕ ಪ್ರಥಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ರಾಘವೇಂದ್ರ ರಾಜ್‍ಕುಮಾರ್ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಅಣಜಿ ನಾಗರಾಜ್ ಛಾಯಾಗ್ರಹಣವಿರಲಿದ್ದು, ಪ್ರದ್ಯೊತನ್ ಸಂಗೀತ ಸಂಯೋಜಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *