ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

Public TV
1 Min Read

ಮೈಸೂರು: ಏಕದಿನ ವಿಶ್ವಕಪ್‌ (World Cup) ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಅವರು ತಮ್ಮ ಮಗನ ಸಲುವಾಗಿ ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ.

ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ (Mysuru) ಮಾನಸ ಗಂಗೋತ್ರಿಯ SDNR (ಶ್ರೀ ಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದ್ರಾವಿಡ್‌ ಅವರ ಹಿರಿಯ ಪುತ್ರ ಸಮಿತ್‌ ದ್ರಾವಿಡ್‌ 19 ವಯೋಮಿತಿ ಕೂಚ್‌ ಬೆಹರ್‌ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ.

ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್‌ ಆಗಮಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರಾಖಂಡ್‌ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್‌ ಪೇರಿಸಿದೆ. 5 ಓವರ್‌ ಬೌಲಿಂಗ್‌ ಮಾಡಿರುವ ಸಮಿತ್‌ ದ್ರಾವಿಡ್‌ 2 ಮೇಡನ್‌ ಎಸೆದು 11 ರನ್‌ ನೀಡಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ

ಆಲ್ರೌಂಡಡರ್ ಆಗಿರುವ ಸಮಿತ್ ಆಟವನ್ನು ನೋಡಲು ರಾಹುಲ್ ದ್ರಾವಿಡ್ ಮತ್ತು ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಕ್ರೀಡಾಂಗಣದ ಕಲ್ಲು ಹಾಸಿನ ಮೇಲೆ ಕುಳಿತು ದ್ರಾವಿಡ್‌ ಮಗನ ಆಟವನ್ನು ಗಮನಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ ಅವರು ತಾವು ಇತರ ಮಕ್ಕಳ ಪೋಷಕರಂತೆ ನಾನು ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

Share This Article