ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೇಂದ್ರಕ್ಕೆ ಕೊರೊನಾ ಒಂದು ನೆಪ: ರಾಹುಲ್ ಗಾಂಧಿ

Public TV
1 Min Read

ಚಂಡೀಗಢ: ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊರೊನಾ (Corona) ಒಂದು ನೆಪ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‍ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿದ್ದರು. ಪತ್ರದಲ್ಲಿ ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಗಮನಿಸಿ ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದರು. ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಅಗತ್ಯವಿಲ್ಲ : IMA

ಈ ಬಗ್ಗೆ ಹರಿಯಾಣದ ನುಹ್ ಜಿಲ್ಲೆಯ ಘಸೆರಾ ಗ್ರಾಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯು ಕಾಶ್ಮೀರಕ್ಕೆ ಹೋಗುತ್ತದೆ. ಇದೀಗ ಕೇಂದ್ರ ಸರ್ಕಾರ ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಆಲೋಚನೆ ಮಾಡಿದೆ. ಕೋವಿಡ್ ಹರಡುತ್ತಿದೆ ಎಂದು ನನಗೆ ಪತ್ರ ಬರೆದಿದ್ದಾರೆ. ಯಾತ್ರೆಯನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಯಾತ್ರೆಯನ್ನು ತಡೆಯಲು ನೆಪಗಳನ್ನು ಹುಡುಕುತ್ತಿದ್ದರು. ಇದೀಗ ಕೊರೊನಾ ಒಂದು ನೆಪವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೋವಿಡ್ ಮಾರ್ಗಸೂಚಿ ಅನುಸರಿಸಿ ಇಲ್ಲಾ ಜೋಡೋ ಯಾತ್ರೆ ನಿಲ್ಲಿಸಿ – ಕಾಂಗ್ರೆಸ್‌ಗೆ ಕೇಂದ್ರ ಸೂಚನೆ

ಕೇಂದ್ರ ಸರ್ಕಾರ ಕೋವಿಡ್ ಹರಡುತ್ತಿದೆ, ಮಾಸ್ಕ್ ಧರಿಸಿ ಎಂದು ಹೇಳುತ್ತಿದೆ. ಇದೆಲ್ಲವೂ ಯಾತ್ರೆ ನಿಲ್ಲಿಸಲು ನೆಪಗಳಷ್ಟೇ. ಅವರು ಈ ದೇಶದ ಶಕ್ತಿ ಮತ್ತು ಸತ್ಯ ಕಂಡು ಹೆದರಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಜಾತಿ, ಧರ್ಮ ಮರೆತು ಹಿರಿಯರು, ಕಿರಿಯರು ಪ್ರತಿಯೊಬ್ಬರು ಭಾಗವಹಿಸುತ್ತಿದ್ದಾರೆ ಇದರಿಂದ ಬಿಜೆಪಿಗೆ ಭಯ ಶುರುವಾಗಿದೆ ಎಂದು ಗುಡುಗಿದ್ದಾರೆ.

ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಚರಿಸಿ ಈಗ ಹರಿಯಾಣ ಪ್ರವೇಶಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *