ನಡೆದಾಡುವ ದೇವರು ಬೇಗ ಗುಣಮುಖರಾಗಲಿ – ರಾಹುಲ್ ಪ್ರಾರ್ಥನೆ

Public TV
1 Min Read

ನವದೆಹಲಿ: ನಡೆದಾಡುವ ದೇವರು, ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿರುವುದು ಅತೀವ ನೋವನ್ನುಂಟು ಮಾಡಿದೆ. ಶ್ರೀಗಳು ಬೇಗ ಗುಣಮುಖರಾಗಲಿ ಅಂತ ಪ್ರಾರ್ಥಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಫೇಸ್‍ಬುಕ್ ಖಾತೆಯ ಮೂಲಕ ಕನ್ನಡದಲ್ಲಿಯೇ ಶ್ರೀಗಳಿಗೆ ಆರೋಗ್ಯ ಹಾಗೂ ಆಯಸ್ಸು ನೀಡಲಿ ಎಂದು ದೇವರಿಗೆ ಬೇಡಿಕೊಂಡಿದ್ದಾರೆ. ಬಸವ ತತ್ವಗಳಿಗೆ ಜೀವ ತುಂಬಿದ ತ್ರಿವಿಧ (ಅನ್ನ/ಅಕ್ಷರ/ಜ್ಞಾನ) ದಾಸೋಹಿ, ಅಸಂಖ್ಯ ಭಕ್ತರ ಬದುಕಿನ ಬೆಳಕು ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೆ ಎಂದು ತಿಳಿಸಿದ್ದಾರೆ.

ತುಮಕೂರು ಸಮೀಪದ ಸಿದ್ದಗಂಗಾ ಮಠಕ್ಕೆ ಅನೇಕರು ಗಣ್ಯರು ಹಾಗೂ ಭಕ್ತರು ಭೇಟಿ ನೀಡಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎನ್ನುವ ಕೂಡು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಶಾಸಕ ಬಿ.ಎಸ್.ಪಾಟೀಲ್ ಸೇರಿದಂತೆ ಅನೇಕ ನಾಯಕರು ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *