ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

By
1 Min Read

– ಮೋದಿ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ

ನವದೆಹಲಿ: ಐಎನ್‍ಡಿಐಎ ಕೂಟ ವಿಪಕ್ಷ ಸ್ಥಾನದಲ್ಲಿ ಕೂರಲು ನಿರ್ಧರಿಸಿದ ಬೆನ್ನಲ್ಲೇ ಮೋದಿ-ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ಆರಂಭಿಸಿದ್ದಾರೆ.

- Advertisement -

ಎಕ್ಸಿಟ್ ಪೋಲ್‍ಗಳನ್ನು (Exit Poll) ಮತ್ತು ಜೂನ್ ನಾಲ್ಕರ ಷೇರುಪೇಟೆ ಮಹಾಪತನವನ್ನು ಅತಿ ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ. ಮೋದಿ ಸೇರಿ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ ಇದು. ಇದರಿಂದ ಹೂಡಿಕೆದಾರರಿಗೆ 30 ಲಕ್ಷ ಕೋಟಿ ನಷ್ಟವಾಗಿದೆ. ಈ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಯಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

- Advertisement -

ಫಲಿತಾಂಶಕ್ಕೆ ಕೆಲವೇ ದಿನ ಮೊದಲು ಮೋದಿ, ಅಮಿತ್ ಶಾ, ನಿರ್ಮಲಾ ಸೀತಾರಾಮ್ ಷೇರ್ ಮಾರ್ಕೆಟ್ ಬಗ್ಗೆ ಏಕೆ ಹೇಳಿಕೆ ನೀಡಿದ್ರು ಎಂದು ಕೇಳಿದ್ದಾರೆ. ಕೆಲ ನಿರ್ದಿಷ್ಟ ಮಾಧ್ಯಮಗಳಿಗೆ ಮೋದಿ ನೀಡಿದ ಸಂದರ್ಶನದ ಬಗ್ಗೆಯೂ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

- Advertisement -

ಈ ನಡುವೆ ವಿಪಕ್ಷ ನಾಯಕತ್ವ ಜವಾಬ್ದಾರಿ ವಹಿಸಲು ಐಎನ್‍ಡಿಐಎ ಕೂಟ ಮುಂದಾಗಿದೆ. ಆದರೆ ರಾಹುಲ್ ಗಾಂಧಿ ಇನ್ನೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ. ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಇನ್ನೂ ವಯನಾಡು-ರಾಯ್‍ಬರೇಲಿ ಪೈಕಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬ ಜಿಜ್ಞಾಸೆಯಲ್ಲಿ ರಾಹುಲ್ ಗಾಂಧಿ ಇದ್ದಾರೆ. ಇದೀಗ ರಾಹುಲ್ ತೆಗೆದುಕೊಳ್ಳುವ ಎರಡು ನಿರ್ಧಾರಗಳ ಬಗ್ಗೆ ಇದೀಗ ಕುತೂಹಲ ಮನೆ ಮಾಡಿದೆ.

Share This Article