ರಾಹುಲ್ ಗಾಂಧಿ ಪ್ರಧಾನಿಯಾದ ನಂತರ ಮಾಡುವ ಮೊದಲ ಕೆಲಸವೇನು? -ವೀಡಿಯೋ

Public TV
1 Min Read

ನವದೆಹಲಿ: ರಾಹುಲ್ ಗಾಂಧಿ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶಾಲೆಯೊಂದರ ಮಕ್ಕಳಿಗಾಗಿ ದೀಪಾವಳಿ ಪ್ರಯುಕ್ತ ಔತಣಕೂಟ ಆಯೋಜಿಸಿದ್ದರು. ಈ ವೇಳೆ ರಾಹುಲ್ ಗಾಂಧಿ ಪ್ರಧಾನಿಯಾದ ನಂತರ ಮಾಡುವ ಮೊದಲ ಕೆಲಸವೇನು? ಎನ್ನುವ ಪ್ರಶ್ನಗೆ ಉತ್ತರಿಸಿದ್ದಾರೆ.

RAHUL GANDHI

ತಮಿಳುನಾಡಿನಲ್ಲಿ ಪ್ರಚಾರ ನಡೆಸುವಾಗ ಭೇಟಿ ನೀಡಿದ್ದ ಮುಲಗುಮೂಡು ಗ್ರಾಮದ ಸೇಂಟ್ ಜೋಸೆಫ್ ಪ್ರೌಢಶಾಲೆಗೆ ಮತ್ತೊಮ್ಮೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಶಲ ವಿಚಾರಿಸಿದ್ದರು. ವಿದ್ಯಾರ್ಥಿಗಳ ಗುಂಪಿನೊಂದಿಗೆ ನಡೆಸಿದ ಸಂವಾದದ ಮಾಹಿತಿಯನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

ಟ್ವಿಟರ್​ನಲ್ಲಿ ಪೋಸ್ಟ್ ನಲ್ಲಿ ರಾಹುಲ್ ಗಾಂಧಿ ಅವರನ್ನು ವಿದ್ಯಾರ್ಥಿನಿಯೊಬ್ಬರು ನೀವು ಪ್ರಧಾನಿಯಾದಾಗ ಮಾಡುವ ಮೊದಲ ಆದೇಶ ಏನಾಗಿರುತ್ತೆ? ಇದಕ್ಕೆ ಉತ್ತರಿಸಿದ ರಾಹುಲ್ ನಾವು ಮಹಿಳೆಯರಿಗೆ ಮೀಸಲಾತಿ ಕೊಡಬಹುದು ಎಂದು ಹೇಳಿದ್ದಾರೆ. ನಿಮ್ಮ ಮಕ್ಕಳಿಗೆ ಏನು ಕಲಿಸುತ್ತೀರಿ ಎಂಬ ಪ್ರಶ್ನೆಗೆ, ವಿನಯ, ವಿನಯದಿಂದ ನಿಮಗೆ ವಿದ್ಯೆ ಒಲಿಯುತ್ತದೆ. ರಾಹುಲ್, ಈ ವರ್ಷದ ನನ್ನ ದೀಪಾವಳಿ ವಿಶೇಷವಾಗಿತ್ತು. ಸಾಂಸ್ಕೃತಿಕ ವೈವಿಧ್ಯ ನಮ್ಮ ದೇಶದ ದೊಡ್ಡ ಶಕ್ತಿ ಮತ್ತು ಇದನ್ನು ನಾವು ಸಂರಕ್ಷಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್RAHUL GANDHI

ರೈತರ ಹೋರಾಟಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಬಲಿಸಿದ್ದನ್ನು ಔತಣಕೂಟದಲ್ಲಿ ಪಾಲ್ಗೊಂಡಿದ್ದವರೊಬ್ಬರು ಶ್ಲಾಘಿಸಿದರು. ನೀವು ಜನರೊಂದಿಗೆ ಒಂದಾಗಿ ಬೆರೆಯುವುದನ್ನು ಇದು ತೋರಿಸುತ್ತದೆ ಎಂಬ ಅವರ ಮಾತುಗಳನ್ನು ನಾವು ವೀಡಿಯೋದಲ್ಲಿ ನೋಡಬಹುದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *