ಭರವಸೆ ಈಡೇರಿಸಿಲ್ಲ, ಅಭಿವೃದ್ಧಿಯಾಗಿಲ್ಲ: ಮಮತಾ ವಿರುದ್ಧ ರಾಹುಲ್ ಕಿಡಿ

Public TV
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಮೊದಲ ಭಾಷಣದಲ್ಲಿ ರಾಹುಲ್ ಗಾಂಧಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾಲ್ಡಾದಲ್ಲಿ ಆಯೋಜನೆಗೊಂಡಿದ್ದ ಮೊದಲ ಪ್ರಚಾರ ಭಾಷಣದಲ್ಲಿ, ಮಮತಾ ಬ್ಯಾನರ್ಜಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಮಮತಾ ಬ್ಯಾನರ್ಜಿ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಎಡಪಕ್ಷಗಳ ಆಡಳಿತದಿಂದ ಬಂಗಾಳದ ಜನ ರೋಸಿ ಹೋಗಿದ್ದರು. ಈಗ ಮಮತಾ ಆಡಳಿತದಲ್ಲೂ ಇದು ಮುಂದುವರಿದಿದೆ, ದೌರ್ಜನ್ಯಗಳು ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಿದರೆ ನಿಮ್ಮ ಮುಖ್ಯಮಂತ್ರಿ ಯಾವುದೇ ಭರವಸೆ ಈಡೇರಿಸಿಲ್ಲ. ಬಂಗಾಳದಲ್ಲಿ ಈಗ ಒಬ್ಬರ ಮಾತ್ರ ಮಾತನಾಡುತ್ತಿದ್ದಾರೆ. ಮಮತಾ ಬ್ಯಾನರ್ಜಿ ಯಾರ ಸಲಹೆಯನ್ನು ಪುರಸ್ಕರಿಸುವುದಿಲ್ಲ. ಬಂಗಾಳದಲ್ಲಿ ಬೇರೆಯವರ ಧ್ವನಿ ಕೇಳಿದ್ದೀರಾ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.

6 ವಾರಗಳ ಹಿಂದೆ ಶರಾದ್ ಪವಾರ್ ನಿವಾಸದ ಮುಂದೆ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಜ.19ರಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಅವರ ವಿಚಾರದಲ್ಲಿ ಸಿಬಿಐ ನಡೆಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿಚಾರದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರು ಒಂದು ನಿರ್ಧಾರ ತೆಗೆದುಕೊಂಡರೆ ರಾಜ್ಯ ನಾಯಕರು ವ್ಯತಿರಿಕ್ತ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಜ.19ರಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಗೈರಾಗಿದ್ದರು. ಇದನ್ನೂ ಓದಿ: ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

Share This Article
Leave a Comment

Leave a Reply

Your email address will not be published. Required fields are marked *