ಮದ್ಯದ ಮತ್ತಿನಲ್ಲಿ ಕಾಲುಜಾರಿ ಬಾವಿಗೆ ಬಿದ್ದ ಯುವಕ ಸಾವು

Public TV
1 Min Read

ರಾಯಚೂರು: ಯುವಕನೊಬ್ಬ ಮದ್ಯ ಕುಡಿದ ಮತ್ತಿನಲ್ಲಿ ಕಾಲುಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಮತಪಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ನಿವಾಸಿ ರಮೇಶ್ (32) ಮೃತ ಯುವಕ. ಮತಪಳ್ಳಿ ಗ್ರಾಮದ ಯಲ್ಲಮ್ಮನ ಜಾತ್ರೆಗೆ ಬಂದಿದ್ದಾಗ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಮೇಶ್ ಮದ್ಯದ ಮತ್ತಿನಲ್ಲಿ ಮೂತ್ರ ವಿಸರ್ಜನೆ ಮಾಡಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದಿದ. ಆದರೆ ಇದು ಯಾರ ಗಮನಕ್ಕೂ ಬಾದೆ ರಮೇಶ್ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ. ಬಾವಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸಲು ರಮೇಶ್ ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *