ರಾಯಚೂರು ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ರಮಾನಂದ್ ಯಾದವ್ ಆಯ್ಕೆ

Public TV
0 Min Read

ರಾಯಚೂರು: ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ರಮಾನಂದ್ ಯಾದವ್ ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಯಾದವ್ ಅಂತಿಮವಾಗಿ ಜಿಲ್ಲಾಧ್ಯಕ್ಷರಾಗಿದ್ದಾರೆ.

ಕಾರಣಾಂತರಗಳಿಂದ ರಾಯಚೂರು ಜಿಲ್ಲಾಧ್ಯಕ್ಷರ ಆಯ್ಕೆಯನ್ನು ತಡೆಹಿಡಿಯಲಾಗಿತ್ತು. ಇಂದು ಒಟ್ಟು 12 ಜಿಲ್ಲೆಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅನುಭವ ರಮಾನಂದ್ ಯಾದವ್ ಅವರಿಗಿದೆ. 2018ರ ವಿಧಾನಸಭೆ ಚುನಾವಣೆಯ ಉಸ್ತುವಾರಿಯಾಗಿ ರಮಾನಂದ್ ಯಾದವ್ ಕಾರ್ಯ ನಿರ್ವಹಿಸಿದ್ದಾರೆ.

ರಮಾನಂದ್ ಯಾದವ್ ನೂತನ ಜಿಲ್ಲಾಧ್ಯಕ್ಷರಾದ ಹಿನ್ನೆಲೆ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಯಾದವ್ ಅವರಿಗೆ ಅಭಿನಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *