ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು – ದ್ವೀಪಗಳಾದ ಹಳ್ಳಿಗಳು

Public TV
1 Min Read

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಟ್ಟಿರುವುದರಿಂದ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.

ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ಐದು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿ, ಕಡದರಗಡ್ಡಿ ನಡುಗಡ್ಡೆ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗಿವೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದಾಗಲೆಲ್ಲಾ ಈ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗುತ್ತವೆ.

ನಡುಗಡ್ಡೆ ಗ್ರಾಮಸ್ಥರಿಗೆ ಸಮರ್ಪಕವಾದ ವಸತಿ ಹಾಗೂ ಭೂಮಿ ಸೌಲಭ್ಯ ಸಿಗದೇ ಸ್ಥಳಾಂತರ ಸಾಧ್ಯವಾಗಿಲ್ಲ. ಹೀಗಾಗಿ ನಡುಗಡ್ಡೆ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಲ್ಲಿನ ಯರಗೋಡಿ ಗ್ರಾಮದಿಂದ ಕಡದರಗಡ್ಡಿ ಗ್ರಾಮದ ಮಧ್ಯೆ ಸೇತುವೆ ನಿರ್ಮಿಸಲು 4 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಮಗಾರಿಗೆ 16 ಕೋಟಿ ರೂ. ಅವಶ್ಯಕತೆ ಇರುವುದರಿಂದ ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಎಂದು ಲಿಂಗಸುಗೂರು ಶಾಸಕ ಡಿ.ಎಸ್ ಹೂಲಿಗೇರಿ ಹೇಳಿದ್ದಾರೆ.

https://www.facebook.com/publictv/videos/374289933210694/

Share This Article
Leave a Comment

Leave a Reply

Your email address will not be published. Required fields are marked *