ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ರಾಯಚೂರು ಜಿಪಂ ಸಿಇಓಗೆ ನೋಟಿಸ್

By
1 Min Read

ರಾಯಚೂರು: ಕಲುಷಿತ ನೀರು (Polluted Water) ಕುಡಿದು ಬಾಲಕನೊಬ್ಬ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ (Raichur ZP CEO) ಶಶಿಧರ್ ಕುರೇರಾ ಅವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ (Notice) ಜಾರಿ ಮಾಡಿದೆ.

ಜಾರಿಗೊಳಿಸಲಾಗಿರುವ ನೋಟಿಸ್‍ಗೆ ಒಂದು ವಾರದ ಒಳಗಾಗಿ ಉತ್ತರಿಸುವಂತೆ ಮಂಡಳಿ ಸೂಚಿಸಿದೆ. ಅಲ್ಲದೆ ತಪ್ಪಿತಸ್ಥ ಗ್ರಾಮ ಪಂಚಾಯಿತಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜಲ ಕಾಯ್ದೆ 1974 ರ ಸೆಕ್ಷನ್ 24 ಮತ್ತು 25ರ ಅಡಿಯಲ್ಲಿ ಜಲ ಮೂಲಗಳನ್ನು ಕಲಿಷಿತಗೊಳಿಸುವುದು ಅಪರಾಧವಾಗಿದೆ. ಈ ಕಾಯ್ದೆ ಅಡಿ ಯಾಕೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್‍ನಲ್ಲಿ ಪ್ರಶ್ನಿಸಲಾಗಿದೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಬಾಲಕ ಸಾವು – 30ಕ್ಕೂ ಹೆಚ್ಚು ಜನ ಅಸ್ವಸ್ಥ

ದೇವದುರ್ಗದ (Devadurga) ರೇಕಲಮರಡಿ ಹಾಗೂ ಲಿಂಗಸುಗೂರಿನ ಗೊರೆಬಾಳ ಗ್ರಾಮದಲ್ಲಿ ಮೇ 26 ರಂದು ಕಲುಷಿತ ನೀರು ಕುಡಿದು ಓರ್ವ ಬಾಲಕ ಮೃತಪಟ್ಟಿದ್ದ. ಅಲ್ಲದೆ 34 ಜನ ಗ್ರಾಮಸ್ಥರು ಅಸ್ವಸ್ಥರಾಗಿದ್ದರು. ಲಿಂಗಸುಗೂರು ತಾಲ್ಲೂಕಿನ ಗೊರೆಬಾಳದಲ್ಲಿ 21 ಜನ ಅಸ್ವಸ್ಥಗೊಂಡಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

Share This Article