ಗಮನಿಸಿ..ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ!

Public TV
1 Min Read

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಶುರುವಾಗಿದ್ದು, ಭಾನುವಾರ ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ.

ಬೆಂಗಳೂರು ಹೊರವಲಯ ಆನೇಕಲ್, ಚಂದಾಪುರ, ಅತ್ತಿಬೆಲೆ, ವಿಜಯನಗರ ಸೇರಿದಂತೆ ಹಲವೆಡೆ ವರುಣನ ಅರ್ಭಟವಾಗಿದೆ. ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಸತತ 1 ಗಂಟೆಯಿಂದ ಸುರಿದ ಮಳೆಗೆ ಜನ ಜೀವನ ಅಸ್ಥವ್ಯಸ್ತವಾಗಿತ್ತು.

ರಾಜ್ಯದ ಹಲವೆಡೆ ನಾಳೆಯಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ. ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗಲಿದೆ.

ಕರ್ನಾಟಕದ ಕರವಾಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಭಾರೀ ಗಾಳಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಇನ್ನೂ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಕೂಡ ಮಳೆಯಾಗಲಿದ್ದು, ಮಂಡ್ಯ- ಮೈಸೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *