ಇಂದು, ನಾಳೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಮಳೆ ಮುನ್ಸೂಚನೆ

Public TV
1 Min Read

ಬೆಂಗಳೂರು: ಇಂದು ಮತ್ತು ನಾಳೆ (ಸೋಮವಾರ) ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ (Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಬೇಸಿಗೆ ಮಳೆ ಅಬ್ಬರ; ಕಲಬುರಗಿಯಲ್ಲಿ ಸಿಡಿಲಿಗೆ ಬಾಲಕ ಬಲಿ, ಕೊಚ್ಚಿಹೋದ ಬೈಕ್‌ಗಳು

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!

Share This Article