ದಕ್ಷಿಣ ಶಿರಡಿ ಶ್ರೀ ಸಾಯಿ ಬಾಬಾ ದರ್ಶನ ಪಡೆದ ರಾಜಮಾತೆ

Public TV
1 Min Read

ಬೆಂಗಳೂರು: ಗುರುಪೂರ್ಣಿಮೆ ನಿಮಿತ್ತ ಇಂದು ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ವಡ್ಡರಹಳ್ಳಿ ಬಳಿಯ ಇರುವ ಪ್ರಸಿದ್ಧ ದಕ್ಷಿಣ ಶಿರಡಿ ಸಾಯಿಬಾಬಾ ದೇಗುಲಕ್ಕೆ ಮೈಸೂರು ಸಂಸ್ಥಾನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಮೋದಾ ದೇವಿ, ದೇವರಲ್ಲಿ ನಂಬಿಕೆ ಇಟ್ಟರೆ ಯಾವ ಆಂತಕವೂ ಬರಲ್ಲ. ಚಂದ್ರಗ್ರಹಣ ಪ್ರಕೃತಿಯಲ್ಲಿ ಆಗಾಗ ಸಂಭವಿಸುತ್ತದೆ. ಒಂದು ವೇಳೆ ಏನಾದರೂ ಸಮಸ್ಯೆ, ದೋಷ ಇದ್ದರೆ ಪೂಜೆ ಮಾಡಿಸಿದರೆ ಪರಿಹಾರವಾಗುತ್ತದೆ. ಆದ್ದರಿಂದ ಇಂದು ರಾತ್ರಿ ಸಂಭವಿಸುವ ರಕ್ತ ಚಂದ್ರ ಗ್ರಹಣದ ಬಗ್ಗೆ ಜನರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ದೇವರು ಎಲ್ಲಾ ಒಳ್ಳೆಯದನ್ನೇ ಮಾಡುತ್ತಾನೆ. ದೇವರಲ್ಲಿ ನಂಬಿಕೆ ಇರಬೇಕು ಒಳಿತಾಗಲಿದೆ ಎಂದು ಹೇಳಿದರು.

ಇಂದು ರಾತ್ರಿ 11.44ರಿಂದ ನಸುಕಿನ ಜಾವ 3.49ರರೆಗೂ ಚಂದ್ರಗ್ರಹಣ ಇರಲಿದ್ದು, ಇದನ್ನು ಶತಮಾನದ ಸುದೀರ್ಘ ಚಂದ್ರ ಗ್ರಹಣ ಎಂದೇ ಬಣ್ಣಿಸಲಾಗಿದೆ. ಈ ಗ್ರಹಣದ ಅವಧಿಯಲ್ಲಿ ಚಂದ್ರಬಿಂಬ ಕೆಂಬಣ್ಣಕ್ಕೆ ತಿರುಗಲಿದೆ. ಹೀಗಾಗಿ ಇದನ್ನ ರಕ್ತಚಂದ್ರಗ್ರಹಣ ಎಂದು ಬಿಂಬಿಸಲಾಗ್ತಿದೆ. ಗ್ರಹಣದ ವೇಳೆ ಮಂಗಳ ಗ್ರಹ ಭೂಮಿಗೆ ನಿಕಟವಾಗಲಿದ್ದು, ಬುಧ ಗ್ರಹ ತನ್ನ ಕಕ್ಷೆಯಿಂದ ದೂರ ಸರಿಯಲಿದೆ.

Share This Article
Leave a Comment

Leave a Reply

Your email address will not be published. Required fields are marked *