ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್

Public TV
1 Min Read

ಜೈಪುರ: ಕಿಡಿಕೇಡಿಗಳ ಗುಂಪೊಂದು ತಮ್ಮ ಬಳಿ ಬರುತ್ತಿರುವುದನ್ನು ತಿಳಿದುಕೊಂಡ ಪತಿ ಭಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೆ ಕಾಯುತ್ತಿದ್ದ ಕಿಡಿಕೇಡಿಗಳು ಮಕ್ಕಳ ಮುಂದೆಯೇ ತಾಯಿಯನ್ನು ಅತ್ಯಾಚಾರ ಮಾಡಿರುವ ಭಯಾನಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಮಾರ್ಚ್ 17 ರಂದು ಧೋಲ್‍ಪುರ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರು ಜಮೀನಿನಿಂದ ತನ್ನ ನಿವಾಸಕ್ಕೆ ಮರಳುತ್ತಿದ್ದಾಗ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. 26 ವರ್ಷದ ಸಂತ್ರಸ್ತೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ತಮ್ಮ ಮನೆಗೆ ತೆರಳುತ್ತಿದ್ದಾಗ ಆರೋಪಿಗಳು ದಂಪತಿಯನ್ನು ತಡೆದು ಥಳಿಸಿದ್ದಾರೆ. ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಪತಿ ಕಂಟ್ರಿಮೇಡ್ ಪಿಸ್ತೂಲ್‍ನಿಂದ ಹೊಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ದತ್ತು ಪುತ್ರಿ ನಿರ್ಲಕ್ಷ್ಯ – ಟ್ರೋಲಿಗರ ಕಣ್ಣಿಗೆ ಗುರಿಯಾದ ಸನ್ನಿ ಉತ್ತರವೇನು?

ಪತ್ನಿ ಮತ್ತು ಮಕ್ಕಳು ಸ್ಥಳದಲ್ಲೇ ಇರುವುದನ್ನು ಗಮನಿಸಿದ ಆರೋಪಿಗಳು ಮಕ್ಕಳಿಗೆ ಬಂದೂಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತನಿಖೆ ಬಳಿಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆರೋಪಿಗಳನ್ನು ಲಾಲು ಠಾಕೂರ್, ಧನ್ ಸಿಂಗ್ ಠಾಕೂರ್, ವಿಪಿನ್ ಠಾಕೂರ್, ಮೋಹಿತ್ ಠಾಕೂರ್, ಸಚಿನ್ ಠಾಕೂರ್ ಮತ್ತು ಲೋಕೇಂದ್ರ ಸಿಂಗ್ ಠಾಕೂರ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಈ ಪ್ರಕರಣ ತಿಳಿದ ತಕ್ಷಣ ರಾಷ್ಟ್ರೀಯ ಮಹಿಳಾ ಆಯೋಗವು(NCW) ಅಪರಿಚಿತ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಎನ್‍ಸಿಡಬ್ಲ್ಯು ರಾಜಸ್ಥಾನದ ಡಿಜಿಪಿಗೆ ಪತ್ರ ಬರೆದಿತ್ತು.

ಈ ಮನವಿಯ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376-ಡಿ(ಗ್ಯಾಂಗ್ ರೇಪ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ) ಕಾಯ್ದೆ, 1989ರ ಅಡಿಯಲ್ಲಿ ಕಾಂಚನ್‍ಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಘಟನೆಯಲ್ಲಿ ಬದುಕುಳಿದಿರುವವರು ಮತ್ತು ಪ್ರಕರಣದ ಆರೋಪಿಗಳು ಅದೇ ಗ್ರಾಮದವರು. ಪ್ರಕರಣದ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಧೋಲ್‍ಪುರದ ಸರ್ಕಲ್ ಅಧಿಕಾರಿ ವಿಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಆಸೆ ತೀರಿಸಿಕೊಳ್ಳಲು ಹೋಗಿ ಮಹಿಳೆ ಎಡವಟ್ಟು- ಎಕ್ಸ್‌ರೇ ನೋಡಿ ದಂಗಾದ ವೈದ್ಯರು!

Share This Article
Leave a Comment

Leave a Reply

Your email address will not be published. Required fields are marked *