ಮದುವೆ ಮಾಡಿಸಿಲ್ಲ ಎಂದು ಹನುಮನ ಮೂರ್ತಿಯನ್ನು ಧ್ವಂಸಗೊಳಿಸಿದ ಯುವಕ

Public TV
1 Min Read

ಜೈಪುರ: ತನಗೆ ಮದುವೆ ಮಾಡಿಸಿಲ್ಲ ಎಂದು ಯುವಕನೋರ್ವ ಗುಡಿಯಲ್ಲಿದ್ದ ಹನುಮನ ಮೂರ್ತಿಯನ್ನು ಧ್ವಂಸಗೊಳಿಸಿರುವ ಘಟನೆ ರಾಜಸ್ಥಾನ ಜೈಪುರ ಜಿಲ್ಲೆಯ ಛೊಮು ಪಟ್ಟಣದಲ್ಲಿ ನಡೆದಿದೆ.

ಭೂಷಣ್ ಹನುಮನ ಮೂರ್ತಿ ಧ್ವಂಸಗೊಳಿಸಿದ ಯುವಕ. ಮದುವೆ ಮಾಡಿಸು ಎಂದು ಹನುಮಂತನನ್ನು ಭೂಷಣ್ ಪ್ರತಿದಿನ ಪೂಜಿಸುತ್ತಿದ್ದನು. ತನ್ನ ಪಾರ್ಥನೆಗೆ ದೇವರು ಸ್ಪಂದಿಸಲಿಲ್ಲವೆಂಬ ಹತಾಶೆಯಿಂದ ಮೂರ್ತಿಯನ್ನು ಧ್ವಂಸ ಮಾಡಿದ್ದಾನೆ. ಮಾನಸಿಕ ಅಸ್ವಸ್ಥನಾಗಿರುವ ಭೂಷಣ್ ನನಗೆ ಮದುವೆಯಾಗಿಲ್ಲ ಎಂದು ಈ ರೀತಿ ಮಾಡಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ಹೇಳಿದ್ದಾನೆ.

ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ಹನುಮನ ಮೂರ್ತಿಯನ್ನು ಧ್ವಂಸ ಮಾಡಿದ್ದಾರೆ ಎಂದು ಊರಿನ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಶ್ವಾನದಳದ ಸಹಾಯದಿಂದ ಈ ಕೆಲಸವನ್ನು ಮಾಡಿರುವುದು ದೇವಸ್ಥಾನ ಮಾಲೀಕನ ಮೊಮ್ಮಗ ಭೂಷಣ್ ಎಂದು ಎರಡು ಗಂಟೆಯೊಳಗೆ ಕಂಡುಹಿಡಿದಿದ್ದಾರೆ.

ಪೊಲೀಸರು ಭೂಷಣ್ ವಿಚಾರಣೆ ನಡೆಸಿದಾಗ ಕಳೆದ ಮೂರು ತಿಂಗಳಿನಿಂದ ತನ್ನ ಮದುವೆಗಾಗಿ ಹನುಮನಲ್ಲಿ ಪಾರ್ಥಿಸುತ್ತಿದೆ ಎಂದು ಹೇಳಿದ್ದಾನೆ. ಅದರೂ ನನಗೆ ಮದುವೆಯಾಗಿಲ್ಲ. ಆದ್ದರಿಂದ ತನ್ನ ಪಾರ್ಥನೆಗೆ ಸ್ಪಂದಿಸದೇ ಇದ್ದ ಹನುಮನನ್ನು ಶನಿವಾರ ಕಬ್ಬಿಣದ ರಾಡ್ ಅನ್ನು ತೆಗೆದುಕೊಂಡು ಒಡೆದು ಹಾಕಿದೆ. ನಂತರ ನಾನು ಮನಗೆ ಹೋಗಿ ಮಲಗಿಕೊಂಡೆ ಎಂದು ಹೇಳಿದ್ದಾನೆ.

ಈ ವಿಚಾರದ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿ ಬೆಗಾರಾಮ್, ಈ ಘಟನೆಯಲ್ಲಿ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದಾನೆ. ಅಲ್ಲದೇ ಈ ದೇವಸ್ಥಾನ ಆತನ ಮನೆಯವರದೇ ಆದ ಕಾರಣ ಅವರು ದೂರನ್ನು ವಾಪಸ್ ಪಡೆದಿದ್ದಾರೆ. ಆದ್ದರಿಂದ ಈ ಪ್ರಕರಣದಲ್ಲಿ ಯಾವುದೇ ರೀತಿಯ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *