ಕಾಲಿಗೆ ಸರಪಳಿ ಕಟ್ಟಿ ಮಹಿಳೆ ಬಂಧನ- ಸಂಬಂಧಿಕರಿಂದ್ಲೇ ರೇಪ್

Public TV
1 Min Read

ಜೈಪುರ್: ಅತ್ತೆ-ಮಾವ ಸರಪಳಿಯಿಂದ ಕಟ್ಟಿಹಾಕಿದ್ದ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್‍ಗಢ್‍ನಲ್ಲಿ ನಡೆದಿದೆ.

ಸಂತ್ರಸ್ತೆಯನ್ನು ಪ್ರತಾಪ್‍ಗಢ್ ಜಿಲ್ಲಾಧಿಕಾರಿ ರಕ್ಷಿಸಿದ್ದಾರೆ. ಮಹಿಳೆಯ ಕಾಲಿಗೆ ಕಟ್ಟಲಾಗಿದ್ದ ಸರಪಳಿಯನ್ನು ಬಿಚ್ಚಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.

ಸಂತ್ರಸ್ತೆಯು ಪ್ರತಾಪ್‍ಗಢ್ ಜಿಲ್ಲೆಯ ಪೀಪಲ್ ಖುಂಟ್ ಗ್ರಾಮದ ನಿವಾಸಿ. ಆಕೆಗೆ ಐವರು ಮಕ್ಕಳಿದ್ದು, ಅತ್ತೆ-ಮಾವ ಹಾಗೂ ಪತಿಯ ಜೊತೆಗೆ ವಾಸವಾಗಿದ್ದಳು. ಆದರೆ ಪತಿ ಮದ್ಯ ವ್ಯಸನಿಯಾಗಿದ್ದು, ನಿತ್ಯವೂ ಕುಡಿದು ಬಂದು ಹೊಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ತೆ-ಮಾವನ ಸಂಬಂಧಿಕರು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದ ನನ್ನನ್ನು ಹಿಡಿದುಕೊಂಡು ಬಂದು ಸರಪಳಿಯಿಂದ ಕಟ್ಟಿ ಹಾಕಿದ್ದಾರೆ ಎಂದು ಮಹಿಳೆ ದೂರಿದ್ದಾಳೆ. ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪ್ರತಾಪ್‍ಗಢ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರತಾಪ್‍ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ಇನ್ನು ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ.

Share This Article
Leave a Comment

Leave a Reply

Your email address will not be published. Required fields are marked *