ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರದಾನ ಸಮಾರಂಭಕ್ಕೆ ರಜನಿಕಾಂತ್ ಗೆ ಆಹ್ವಾನ

By
1 Min Read

ವೆಂಬರ್ 1ರಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ತಮಿಳು ಸಿನಿಮಾ ರಂಗದ ಖ್ಯಾತ ನಟ, ಕನ್ನಡಿಗ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅತಿಥಿಗಳಾಗಿ ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಇಬ್ಬರೂ ನಟರಿಗೆ ಆಹ್ವಾನ ನೀಡಲಾಗಿದೆಯಂತೆ.

ರಜನಿಕಾಂತ್ (Rajinikanth) ಬೆಂಗಳೂರಿನಲ್ಲಿ ಹುಟ್ಟು ಬೆಳೆದವರು. ತಮಿಳು ಸಿನಿಮಾ ರಂಗದಲ್ಲಿ ಹೆಸರು ಮಾಡಿದರೂ, ಇವತ್ತಿಗೂ ಕರ್ನಾಟಕದೊಂದಿಗೆ ನಂಟು ಇಟ್ಟುಕೊಂಡಿದ್ದಾರೆ. ಆಗಾಗ್ಗೆ ಬೆಂಗಳೂರಿಗೂ ಬಂದು ಹೋಗುತ್ತಾರೆ. ಜ್ಯೂನಿಯರ್ ಎನ್.ಟಿ.ಆರ್  (Jr. N.T.R) ತಾಯಿ ಕೂಡ ಕರ್ನಾಟಕದವರು. ಹಾಗಾಗಿ ಈ ಇಬ್ಬರನ್ನೂ ಅತಿಥಿಯಾಗಿ ಕರೆದಿದ್ದಾರಂತೆ. ಬರುವ ಕುರಿತು ಈಗಲೇ ಖಚಿತತೆ ಇಲ್ಲದಿದ್ದರೂ, ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಇಂಥದ್ದೊಂದು ಗೌರವಕ್ಕೆ ಈ ಮೊದಲು ಡಾ.ರಾಜ್ ಕುಮಾರ್ ಕೂಡ ಪಾತ್ರರಾಗಿದ್ದಾರೆ. ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಈ ಇಬ್ಬರೂ ಪಾತ್ರರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *