ಮಗಳ ದಾಂಪತ್ಯ ಸರಿಪಡಿಸಲು ರಜನಿಕಾಂತ್ ಸರ್ಕಸ್

Public TV
1 Min Read

ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಗಳು ಐಶ್ವರ್ಯ ಹಾಗೂ ಧನುಷ್ ದಾಂಪತ್ಯವನ್ನು ಸರಿಪಡಿಸಲು ಮಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ನಟ ಧನುಷ್ ಹಾಗೂ ಐಶ್ವರ್ಯ ರಜನಿಕಾಂತ್ 18 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುವ ಮೂಲಕ ಜನವರಿ 17ರಂದು ವಿಚ್ಛೇದನ ಪಡೆದರು. ನಂತರ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಬಳಿಕ ಇಬ್ಬರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ದೊಡ್ಡ ಆಘಾತವನ್ನುಂಟು ಮಾಡಿತ್ತು. ಐಶ್ವರ್ಯ ಹಾಗೂ ಧನುಷ್‍ಗೆ ಇಬ್ಬರು ಮುದ್ದಾದ ಗಂಡುಮಕ್ಕಳಿದ್ದಾರೆ. ಇದೀಗ ವಿಚ್ಛೇದನ ಬಳಿಕ ಇಬ್ಬರು ತಮ್ಮ ತಮ್ಮ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಅವರು ಸಿದ್ದರಾಮಯ್ಯರ ಬಗ್ಗೆ ಮಾತನಾಡಬಾರದು: ಶಿವರಾಮೇಗೌಡ

ಸದ್ಯ ಧನುಷ್ ಹಾಗೂ ಐಶ್ವರ್ಯ ನಡುವಿನ ವಿಚ್ಛೇದನ ರಜನಿಕಾಂತ್ ಅವರಿಗೆ ಬೇಸರ ತರಿಸಿದ್ದು, ಅವರಿಬ್ಬರನ್ನು ಒಂದು ಮಾಡಲು ಸಕಲ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಧನುಷ್ ಹಾಗೂ ಐಶ್ವರ್ಯ ಮಾತ್ರ ರಾಜಿ ಮಾಡಿಕೊಳ್ಳುತ್ತಾರೋ ಎಂಬುವುದನ್ನು ಕಾದು ನೋಡಬೇಕಾಗಿದೆ. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ

Share This Article
Leave a Comment

Leave a Reply

Your email address will not be published. Required fields are marked *