ಎಲ್ಲಾ ಹುಡುಗಿಯರೇ ಇಂದು ದೀಪಾವಳಿ, ಹೊಸ ವರ್ಷ ಆಚರಿಸಿ: ರಾಖಿ ಸಾವಂತ್

Public TV
2 Min Read

ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಪಶುವೈದ್ಯೆ ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ ವಿಷಯ ತಿಳಿದು ತನ್ನ ಇನ್‍ಸ್ಟಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾಳೆ.

ರಾಖಿ ವಿಡಿಯೋದಲ್ಲಿ, ಎಲ್ಲ ಹುಡುಗಿಯರಿಗೂ ದೀಪಾವಳಿ, ಈದ್ ಹಾಗೂ ಹೊಸ ವರ್ಷದ ಶುಭಾಶಯಗಳು. ಭಾರತದ ಎಲ್ಲ ಮಹಿಳೆಯರಿಗೆ ಇಂದು ದೀಪಾವಳಿ, ಈದ್ ಹಾಗೂ ಹೊಸ ವರ್ಷ. ಏಕೆಂದರೆ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಇಂದು ಬೆಳಗ್ಗೆ ಎನ್‍ಕೌಂಟರ್ ಮಾಡಲಾಗಿದೆ. ಪ್ರಧಾನಿ ಮೋದಿ ಅವರಿಗೆ, ಕರ್ನಾಟಕ, ತೆಲಂಗಾಣ ಸಿಎಂ ಹಾಗೂ ತೆಲಂಗಾಣ ಪೊಲೀಸರಿಗೆ ನಾನು ಧನ್ಯವಾದ ತಿಳಿಸಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾಳೆ.

ತೆಲಂಗಾಣ ಆಗಲಿ, ಭಾರತ ಆಗಲಿ ಪ್ರತಿಯೊಬ್ಬ ಮಹಿಳೆ ಯಾರ ಭಯವಿಲ್ಲದೆ ತಲೆ ಎತ್ತು ಸ್ವಾತಂತ್ರ್ಯದಿಂದ ಓಡಾಡಬಹುದು. ಏಕೆಂದರೆ ಈಗ ಯಾವೊಬ್ಬ ಆರೋಪಿ ಕೂಡ ತಪ್ಪಿಸಿಕೊಂಡು ಓಡಿ ಹೋಗುವುದಕ್ಕೆ ಆಗುವುದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತೆ. ಇನ್ನು ಮುಂದೆ ರೇಪಿಸ್ಟ್ ಗಳನ್ನು ಎನ್‍ಕೌಂಟರ್ ಮಾಡಲಾಗುತ್ತದೆ. ಎಲ್ಲಾ ಹುಡುಗಿರೇ ಇಂದು ದೀಪಾವಳಿ, ಈದ್ ಹಾಗೂ ಹೊಸ ವರ್ಷವನ್ನು ಆಚರಿಸಿ ಎಂದು ವಿಡಿಯೋದಲ್ಲಿ ತಿಳಿಸಿದ್ದಾಳೆ.

ಈ ಹಿಂದೆ ರಾಖಿ, ಸ್ನೇಹಿತರೇ ಇಂದು ನನಗೆ ತುಂಬಾ ದುಃಖವಾಗುತ್ತಿದೆ. ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಆರೋಪಿಗಳು ನಂಬಿಕೆಗೆ ಅರ್ಹರಲ್ಲ ಎಂದು ದೇಶದ ಮಹಿಳೆಯರಿಗೆ ಹೇಳಲು ಇಷ್ಟಪಡುತ್ತೇನೆ. ಇವರು ಮಾನವೀಯತೆಯನ್ನು ನೋಡುವುದಿಲ್ಲ. ರಾತ್ರಿ ವೇಳೆ ಹೋಗುವಾಗ ಸುರಕ್ಷಿತವಾಗಿರಿ. ನಿಮ್ಮ ಮಾನವನ್ನು ನೀವೇ ಉಳಿಸಿಕೊಳ್ಳಿ. ಏಕೆಂದರೆ ನಿಮ್ಮ ಮಾನ ಉಳಿಸಲು ಇಲ್ಲಿ ಯಾರೂ ಬರುವುದಿಲ್ಲ ಎಂದು ಹೇಳಿದ್ದಳು.

ಆರೋಪಿಗಳಿಗೆ ಗಲ್ಲಿಗೆ ಏರಿಸಬೇಕೆಂದು ನಾನು ಈ ದೇಶದ ಕಾನೂನಿಗೆ ಹೇಳಲು ಬಯಸುತ್ತೇನೆ. ಗಲ್ಲಿಗೇರಿಸಲು ಆಗಲಿಲ್ಲ ಎಂದರೆ ಅವರನ್ನು ನಪುಂಸಕನನ್ನಾಗಿ ಮಾಡಬೇಕು. ಇದರಿಂದ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವುದರಿಂದ ಏನು ಆಗುತ್ತೆ ಎಂಬುದು ತಿಳಿಯುತ್ತದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇದರಿಂದ ಭಾರತದ ಕಾನೂನು ಎಷ್ಟು ಕಠಿಣವಾಗಿದೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು ಎಂದಿದ್ದಳು.

Share This Article
Leave a Comment

Leave a Reply

Your email address will not be published. Required fields are marked *