ಕೊಲ್ಲೂರಿನಲ್ಲಿ ರಕ್ಷಿತ್ ಶೆಟ್ಟಿ ಚಂಡಿಕಾ ಹೋಮ

Public TV
1 Min Read

ಉಡುಪಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕುಟುಂಬಸ್ಥರು ಇಂದು ಕೊಲ್ಲೂರಿನ ಮೂಕಾಂಬಿಕಾ ದೇವಿಯ ಸನ್ನಧಿಯಲ್ಲಿ ಚಂಡಿಕಾ ಹೋಮ ನಡೆಸಿದರು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಮೂಕಾಂಬಿಕಾ ದೇವಿ ಸನ್ನಿಧಿಗೆ ಆಗಮಿಸಿದ ರಕ್ಷಿತ್ ಶೆಟ್ಟಿ, ತಂದೆ-ತಾಯಿ, ಸಹೋದರ ವಿಶೇಷ ಪೂಜೆ ಮತ್ತು ಹೋಮದಲ್ಲಿ ಭಾಗಿಯಾಗಿದರು. ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಮತ್ತು ಮುಂದಿನ ಚಿತ್ರಕ್ಕೂ ಯಶಸ್ಸು ಸಿಗುವಂತೆ ತಾಯಿಯಲ್ಲಿ ರಕ್ಷಿತ್ ಪ್ರಾರ್ಥನೆ ಸಲ್ಲಿಸಿದರು.

ಕಿರಿಕ್ ಪಾರ್ಟಿ ಸಿನಿಮಾ ಯಶಸ್ಸಿನ ಬಳಿಕ ರಕ್ಷಿತ್ ಶೆಟ್ಟಿ ವಿಭಿನ್ನ ಕಥಾ ಹಂದರವುಳ್ಳ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಟೀಸರ್ ಚಂದನವನದಲ್ಲಿ ಭರವಸೆ ಮೂಡಿಸಿದ್ದು, ಅಭಿಮಾನಿಗಳು ಸಿನಿಮಾಗಾಗಿ ಕಾಯುತ್ತಿದ್ದಾರೆ. ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್ ನಲ್ಲಿ ಸಾಗುವ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಸಾವಿರಾರು ಕಲಾವಿದರು ಸಾಥ್ ನೀಡಿದ್ದು, ಇಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿಯವರ ಹುಟ್ಟುಹಬ್ಬದಂದು ಚಿತ್ರದ ಎರಡನೇ ಟೀಸರ್ ರಿಲೀಸ್ ಆಗಿತ್ತು. ಟೀಸರ್ ನಲ್ಲಿಯ “ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗಬೇಕು” ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *