ನವೆಂಬರ್‍ನಲ್ಲಿ ಉಡುಪಿಯಲ್ಲಿ ರಾಮಮಂದಿರಕ್ಕೆ ಮುಹೂರ್ತ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

Public TV
1 Min Read

ಲಕ್ನೋ: ರಾಮಮಂದಿರ ನಿರ್ಮಾಣ ಸಂಬಂಧವಾಗಿ ಉಡುಪಿಯಲ್ಲಿ ಸಾಧು ಸಂತರು ಮುಹೂರ್ತ ನಿಗದಿ ಮಾಡಲು ಮುಂದಾಗಿದ್ದಾರೆ.

ನವೆಂಬರ್‍ನಲ್ಲಿ ಉಡುಪಿಯಲ್ಲಿ ಸಾಧು ಸಂತರ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ನಿರ್ಧಾರ ಮಾಡಲಾಗುವುದು ಎಂದು ಉತ್ತರ ಪ್ರದೇಶದ ಉನೌನ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಉಡುಪಿ ಸಮ್ಮೇಳನದಲ್ಲಿ ದೇಶದ ನಾನಾ ಭಾಗದ ಸಾಧು ಸಂತರು ಭಾಗಿಯಾಗಿದ್ದಾರೆ. ಈ ವೇಳೆ ರಾಮಮಂದಿರ ನಿರ್ಮಾಣ ಸಂಬಂಧ ದೀರ್ಘ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಬಗ್ಗೆ ಹೆಚ್ಚು ವಿಳಂಬ ಮಾಡದೇ ದೇಶದ ಸಂತರು ಒಮ್ಮತಾಭಿಪ್ರಾಯ ಹೊಂದಿದ್ದಾರೆ ಎಂದು ಅವರು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *