ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸಲು ರಾಮನೂ ಭರವಸೆ ನೀಡುತ್ತಿರಲಿಲ್ಲ – ಯುಪಿ ಮಂತ್ರಿ

Public TV
2 Min Read

ಲಕ್ನೋ: ಪ್ರಸ್ತುತ ಸನ್ನಿವೇಶದಲ್ಲಿ ಶ್ರೀರಾಮನೂ ಸಹ ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸುವ ಭರವಸೆ ನೀಡುತ್ತಿರಲಿಲ್ಲ ಎಂಬ ಉತ್ತರ ಪ್ರದೇಶ ಸರ್ಕಾರದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತೆಲಂಗಾಣದ ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ನಡೆದ ಬೆನ್ನಲ್ಲೇ ಉತ್ತರ ಪ್ರದೇಶದ ಉನ್ನಾವ್‍ನಲ್ಲಿ ಅದೇ ರೀತಿಯ ಪ್ರಕರಣ ಜರುಗಿತ್ತು. ಅತ್ಯಾಚಾರಗೈದಿದ್ದಲ್ಲದೆ ಮಹಿಳೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ರಣವೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ಅಪರಾಧಿಗಳು ಯಾರೇ ಆಗಿದ್ದರೂ ಶಿಕ್ಷೆ ವಿಧಿಸಬೇಕು. ಈ ಕುರಿತು ರಾಜಕೀಯ ಮಾಡಬಾರದು. ಉನ್ನಾವ್ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಈ ಸಂದರ್ಭದಲ್ಲಿ ಶ್ರೀ ರಾಮನಿದ್ದಿದ್ದರೂ ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸುವ ಕುರಿತು ಶೇ.100ರಷ್ಟು ಭರವಸೆ ನೀಡುತ್ತಿರಲಿಲ್ಲ. ಅಪರಾಧಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಾರೆ. ಇದೀಗ ಉತ್ತರ ಪ್ರದೇಶದಲ್ಲಿ ಯಾವುದೇ ರೀತಿಯ ಭಯದ ವಾತಾವರಣವಿಲ್ಲ ಎಂದು ಹೇಳಿದ್ದಾರೆ.

ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶ ಉನ್ನಾವೋದಲ್ಲಿ ನಡೆದಿದೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಅವಳೇ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ಅಮಾನವೀಯ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಯು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಈ ಪ್ರಕರಣದ ಪ್ರತ್ಯಕ್ಷದರ್ಶಿ ರವೀಂದ್ರ ಪ್ರಕಾಶ್ ಪ್ರಮುಖ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು ಎಂದು ತಿಳಿಸಿದರು. ಇದನ್ನೂ ಓದಿ: ಶೇ.90ರಷ್ಟು ದೇಹ ಸುಟ್ಟ ನಂತರವೂ 1 ಕಿ.ಮೀ ಓಡಿ ಅತ್ಯಾಚಾರ ಸಂತ್ರಸ್ತೆಯಿಂದ 100ಕ್ಕೆ ಕರೆ

ಮಹಿಳೆಯನ್ನು ಕೆಲ ತಿಂಗಳ ಹಿಂದೆ ಅತ್ಯಾಚಾರ ಮಾಡಲಾಗಿತ್ತು. ಮಾರ್ಚ್‍ನಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಕುಟುಂಬದವರ ಒತ್ತಾಯದ ಮೇರೆಗೆ ಮಹಿಳೆಯು ಪ್ರಮುಖ ಆರೋಪಿಯನ್ನೇ ವಿವಾಹವಾಗಿದ್ದಳು. ಮದುವೆ ನಂತರ ಒಬ್ಬರೂ ಬೇರೆ ಮನೆ ಮಾಡಿದ್ದು, ಈ ವೇಳೆ ಆರೋಪಿಯು ಈಕೆಯನ್ನು ಪತ್ನಿಯಾಗಿ ಸ್ವೀಕರಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಇಡಿ ಉತ್ತರ ಪ್ರದೇಶದಲ್ಲಿ ತೀವ್ರಸಂಚಲನವನ್ನೇ ಮೂಡಿಸಿದ್ದು, ಮುಖ್ಯಮಂತ್ರಿ ಆದಿತ್ಯನಾಥ್ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *