ಕರೆದಾಗ ಸ್ಪೀಕರ್ ಕಚೇರಿಗೆ ಹೋಗ್ತೇನೆ: ರಾಮಲಿಂಗಾ ರೆಡ್ಡಿ

Public TV
1 Min Read

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಕರೆದಾಗ ವಿಚಾರಣೆ ಹೋಗುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಮೇಶ್ ಕುಮಾರ್ ಅವರಿಂದ ಯಾವುದೇ ನೋಟಿಸ್ ನನಗೆ ತಲುಪಿಲ್ಲ. ಸ್ಪೀಕರ್ ನಿರ್ಧಾರದ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಸ್ಪೀಕರ್ ಕರೆದಾಗ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ಕಾರಿನಲ್ಲಿಯೇ ತಿಳಿಸಿ ದಿಢೀರ್ ಅಂತಾ ಕರೆದಿದ್ದ ಸುದ್ದಿಗೋಷ್ಠಿಯನ್ನು ರದ್ದುಗೊಳಿಸಿದರು.

ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಮಲಿಂಗಾ ರೆಡ್ಡಿ, ನಿರ್ಧಾರದಿಂದ ಹಿಂದೆ ಸರಿಯುವ ಮಾತಿಲ್ಲ. ನಾನು ಯಾಕೆ ರಾಜೀನಾಮೆ ನೀಡಿದ್ದೇನೆ ಎಂಬ ವಿಷಯ ಪಕ್ಷದ ಎಲ್ಲ ನಾಯಕರಿಗೂ ತಿಳಿದಿದೆ. ಪದೇ ಪದೇ ಅದೇ ಮಾತನ್ನು ಪುನಾರವರ್ತಿಸಲು ಹೋಗಲ್ಲ. ಪುತ್ರಿ, ಜಯನಗರ ಶಾಸಕಿಯಾಗಿರುವ ಸೌಮ್ಯ ರೆಡ್ಡಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರು ಎಂದು ಹೇಳಿದ್ದರು.

ಇಂದು ಕಚೇರಿಗೆ ಆಗಮಿಸಿದ್ದ ಸ್ಪೀಕರ್ ರಮೇಶ್ ಕುಮಾರ್, ಸಲ್ಲಿಕೆಯಾದ 13 ರಾಜೀನಾಮೆಗಳ ಪೈಕಿ ಐದು ಮಾತ್ರ ಕ್ರಮಬದ್ಧವಾಗಿವೆ. ಉಳಿದ 8 ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ. ರಾಮಲಿಂಗಾ ರೆಡ್ಡಿ ಅವರನ್ನು ವಿಚಾರಣೆಗೆ ಸ್ಪೀಕರ್ ಜುಲೈ 15ರಂದು ಕಚೇರಿಗೆ ಆಗಮಿಸುವಂತೆ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *