ಕೊಲೆ ಕೇಸ್‌ ಆರೋಪಿ ಕೈಬಿಟ್ಟ ಆರೋಪ; ಇನ್‌ಸ್ಪೆಕ್ಟರ್‌ ಸೇರಿ 6 ಸಿಬ್ಬಂದಿ ಅಮಾನತು

Public TV
1 Min Read

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಕೈಬಿಟ್ಟ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಸೇರಿದಂತೆ 6 ಸಿಬ್ಬಂದಿ ಅಮಾನತು ಮಾಡಲಾಗಿದೆ.

ಇನ್‌ಸ್ಪೆಕ್ಟರ್‌ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐ ಮಹೇಶ್ ಹಾಗೂ ಪೈರೋಜ್ ಖಾನ್, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್, ಕಾನ್‌ಸ್ಟೇಬಲ್ ಬಸವರಾಜ್ ಅಮಾನತು ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ‌.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನ ಹಣ ಪಡೆದು ಬಿಟ್ಟಿದ್ದು ಹಾಗೂ ಗಾಂಜಾ ಆರೋಪಿಯಿಂದ ಹಣ ಪಡೆದು ಯಾವುದೇ ದೂರು ದಾಖಲಿಸದೇ ಇದ್ದ ಆರೋಪ ಕೇಳಿಬಂದಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪದಲ್ಲಿ ಸತ್ಯಾಂಶ ಕಂಡು ಬಂದ ಹಿನ್ನೆಲೆ ಅಮಾನತು ಮಾಡಲಾಗಿದೆ.

ಇನ್‌ಸ್ಪೆಕ್ಟರ್‌ ವಿರುದ್ಧ ಕಮಿಷನರ್ ದಯಾನಂದ್‌ಗೆ ರಾಮಮೂರ್ತಿನಗರ ಠಾಣೆ ಸಿಬ್ಬಂದಿ ಪತ್ರ ಬರೆದಿದ್ದರು. ಈ ಸಂಬಂಧ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ತನಿಖೆ ನಡೆಸಿದ್ದರು.

Share This Article