ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

Public TV
2 Min Read

ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅದರ ಪರಿಣಾಮ ಅಲ್ಲಿನ ಹಿಂದೂ ದೇವಾಲಯದ ಮೇಲೂ ಬೀರಿದೆ. ದ್ವೀಪ ರಾಷ್ಟ್ರದ ನುವಾರಾ ಎಲಿಯಾದಲ್ಲಿರುವ ರಾಮಾಯಣ ಖ್ಯಾತಿಯ ಅಶೋಕ್ ವಾಟಿಯಾ ದೇವಾಲಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.

ಇದನ್ನು ಸೇತಾ ಅಮ್ಮನ್ ದೇವಸ್ಥಾನ ಎಂದೂ ಸಹ ಕರೆಯುತ್ತಾರೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದ್ದು, ದೇವಾಲಯದ ಆಡಳಿತವು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ. ಈ ಕುರಿತು ದೇವಾಲಯದ ಅಧ್ಯಕ್ಷ ಮತ್ತು ನುವಾರಾ ಎಲಿಯಾ ಕ್ಷೇತ್ರದ ಸಂಸದ ವಿ.ರಾಧಾಕೃಷ್ಣನ್ ಮಾತನಾಡಿದ್ದು, ಸೀತಾ ಮಾತಾ ದೇವಾಲಯವನ್ನು ನಡೆಸಲು ದೇವಾಲಯ ಮತ್ತು ಅದರ ಸಿಬ್ಬಂದಿಗೆ ಕಷ್ಟಕರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಪೆಟ್ರೋಲ್ ಮುಗಿದಿದೆ: ಶ್ರೀಲಂಕಾ

ರಾಮಾಯಣದಲ್ಲಿ ಅಶೋಕ್ ವಾಟಿಕಾ (ಅಶೋಕ ವನ) ಪ್ರಮುಖ ಪಾತ್ರ ವಹಿಸುತ್ತದೆ. ಭಾರತದಿಂದ ಅದರಲ್ಲೂ ಮುಖ್ಯವಾಗಿ ಉತ್ತರ ಭಾರತದಿಂದ ಅನೇಕ ಭಕ್ತರು ಇಲ್ಲಿಗೆ ಬರುತ್ತಾರೆ. ಆದರೆ ಈಗ ಯಾರೂ ಬರುತ್ತಿಲ್ಲ. ದೇವಾಲಯದ ಅಭಿವೃದ್ಧಿ ಭಕ್ತರು ಮತ್ತು ಪ್ರವಾಸಿಗರ ಮೇಲೆ ಅವಲಂಬಿತವಾಗಿರುವಾಗ, ದೇವಸ್ಥಾನವನ್ನು ನಡೆಸುವುದು ಕಷ್ಟಕರವಾಗಿದೆ. ಸಿಬ್ಬಂದಿ ಸಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತೀಯರು ಈಗಿನ ಪರಿಸ್ಥಿತಿಯಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಲು ಭಯಪಡುತ್ತಾರೆ ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.

ನಾನು ಈ ಹಿಂದೆ ಸೀತಾ ದೇವಸ್ಥಾನವನ್ನು ಖಾಲಿಯಾಗಿ ನೋಡಿಲ್ಲ. ಜನರು ಸದಾ ಕಾಲ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ ಈಗ ಭಕ್ತರು ಯಾರೂ ಬರುವುದಿಲ್ಲ. ಶ್ರೀಲಂಕಾದಲ್ಲಿ ವಿದ್ಯುತ್ ಕಡಿತದಿಂದ ಜನರು ಬರಲು ಹೆದರುತ್ತಾರೆ. ಡೀಸೆಲ್, ಪೆಟ್ರೋಲ್ ಮತ್ತು ಗ್ಯಾಸ್ ಅಭಾವ ಕೂಡ ಎದುರಾಗಿದೆ ಎಂದು ಸಮಸ್ಯೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

ರಾಮಾಯಣದಲ್ಲಿ ಭಾರತ ಮತ್ತು ಶ್ರೀಲಂಕಾ ದೇಶಗಳ ಸಂಸ್ಕೃತಿ, ಜನಜೀವನದ ಬಗ್ಗೆ ತಿಳಿಸಲಾಗಿದೆ. ರಾಮಾಯಣದಲ್ಲಿ ರಾವಣನು ಸೀತೆಯನ್ನು ಹೇಗೆ ತಂದು ಅಶೋಕ ವಾಟಿಕಾದಲ್ಲಿ ಇರಿಸಿದನು ಎಂದು ಉಲ್ಲೇಖಿಸಲಾಗಿದೆ.

ಶ್ರೀಲಂಕಾದಲ್ಲಿ ಔಷಧಿಗಳು, ಅಡುಗೆ ಅನಿಲ, ಇಂಧನ ಮತ್ತು ಆಹಾರ ಸೇರಿದಂತೆ ಮೂಲಭೂತ ಅವಶ್ಯಕತೆಗಳ ಕೊರತೆಯೊಂದಿಗೆ ಆರ್ಥಿಕ ಸ್ಥಿತಿಯು ಹದಗೆಟ್ಟಿದೆ. ಅಗತ್ಯ ವಸ್ತುಗಳ ಆಮದಿಗೆ ಬೇಕಾದ ವಿದೇಶಿ ಕರೆನ್ಸಿ ಕೊರತೆಯೂ ಈ ಬಿಕ್ಕಟ್ಟಿಗೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *