ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಬಿಐ ತನಿಖೆಗೆ ಮನವಿ

By
1 Min Read

ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಸಿಡಿ ಪ್ರಕರಣ (CD Case) ದೆಹಲಿ (Delhi) ಅಂಗಳ ತಲುಪಿದೆ. ಈ ಬಗ್ಗೆ ಸಿಬಿಐ (CBI) ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮನವಿ ಮಾಡಿದ್ದಾರೆ.

ಅಮಿತ್ ಶಾ ಭೇಟಿಗಾಗಿ ಗುರುವಾರ ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಶುಕ್ರವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಸಾಕ್ಷ್ಯಗಳೊಂದಿಗೆ ಮನವಿ ಪತ್ರ ನೀಡಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಭೇಟಿಗೂ ಮುನ್ನ ರಮೇಶ್ ಜಾರಕಿಹೊಳಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದರು. ಎಲ್ಲಾ ಅಗತ್ಯ ದಾಖಲೆಗಳಿದ್ದು ಈ ಬಗ್ಗೆ ಕ್ರಮ ಆದಲ್ಲಿ ದೊಡ್ಡ ರಾಜಕೀಯ ಲಾಭವಾಗಲಿದೆ ಎಂದು ಅವರಿಗೆ ವಿವರಿಸಿದ್ದರು. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಇದಾದ ಬಳಿಕ ಸಂಸತ್ ಭವನದಲ್ಲಿರುವ ಅಮಿತ್ ಶಾ ಕಚೇರಿಯಲ್ಲಿ ಭೇಟಿಯಾಗಿ ಅಗತ್ಯ ದಾಖಲೆಗಳೊಂದಿಗೆ ಮನವಿ ಪತ್ರ ನೀಡಿದ್ದು, ಪ್ರಕರಣದ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದಲ್ಲಿ ಸದ್ದು ಮಾಡುತ್ತಿದ್ದ ಸಿಡಿ ಪ್ರಕರಣ ಈಗ ದೆಹಲಿ ಅಂಗಳ ತಲುಪಿದ್ದು, ಅದನ್ನು ಸಿಬಿಐ ಶಿಫಾರಸು ಮಾಡಲಾಗುತ್ತಾ ಎನ್ನುವ ಕುತೂಹಲ ಮೂಡಿದೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *