ಸಿಎಂ ಭೇಟಿಯಾದ ರಮೇಶ್ ಜಾರಕಿಹೋಳಿ

Public TV
1 Min Read

– ಸಚಿವ ಸಂಪುಟ ಸೇರಲು ಕಸರತ್ತು

ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿರುವ ಬಗ್ಗೆ ವರದಿಯಾಗಿದೆ.

ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಕಣ್ಣು ತಪ್ಪಿಸಿ ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿರುವ ಸಾಧ್ಯತೆ ಇದೆ. ಸಿಡಿ ಪ್ರಕರಣದ ನಂತರ ಸಂಪುಟ ಸೇರಲು ಕಸರತ್ತು ನಡೆಸುತ್ತಿರುವ ಜಾರಕಿಹೊಳಿ, ಧಾರವಾಡದಲ್ಲಿ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ದೀಪಾವಳಿ ಗಿಫ್ಟ್ ಅಲ್ಲ, ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ ಕಡಿಮೆಯಾಗಬೇಕು: ಸತೀಶ್ ಜಾರಕಿಹೊಳಿ

ಬೊಮ್ಮಾಯಿ ತಮ್ಮ  ಪುತ್ರನ ಕಾರ್ಖಾನೆಯಲ್ಲಿ ಪೂಜೆಗೆ ಬಂದಿದ್ದರು. ಕುಟುಂಬ ಸದಸ್ಯರಷ್ಟೇ ಸೇರಿ ಈ ಪೂಜೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಖಾನೆಗೆ ಬಂದು ರಮೇಶ್ ಜಾರಕಿಹೋಳಿ ಭೇಟಿ ಮಾಡಿ ತೆರಳಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ – ವಾಹನ ಸವಾರರ ಮಿಶ್ರ ಪ್ರತಿಕ್ರಿಯೆ

Share This Article
Leave a Comment

Leave a Reply

Your email address will not be published. Required fields are marked *