ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್

1 Min Read

ಚಾಮುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ (Ranveer Singh) ಇದೀಗ ಕ್ಷಮೆಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲ್ಲ ಎಂದಿದ್ದಾರೆ.

- Advertisement -

ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಕಾಂತಾರ ಚಿತ್ರದ ನಟನ ಮುಂದೆ ಮಾಡಿದ್ದ ದೈವ ಅಪಚಾರಕ್ಕೆ ಈಗ ಬೆಲೆ ತೆರುವಂತಾಗಿದೆ. ಕೋರ್ಟ್ ನಿರ್ದೇಶನದ ಮೇಲೆ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವುದಕ್ಕೆ ಹೈಕೋರ್ಟ್ ಮೊರೆ ಹೋಗಿದ್ದ ರಣವೀರ್ ಇದೀಗ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

- Advertisement -

- Advertisement -

ಇನ್ನು ಯಾವ ಧರ್ಮದ ಬಗ್ಗೆಯೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಧಕ್ಕೆ ತರುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಈ ಘಟನೆ ಉದ್ದೇಶಪೂರ್ವಕವಾಗಿ ಆಗಿರೋದಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

- Advertisement -

ಇನ್ನು ಇಂದು ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ದೂರುದಾರ ಪರ ವಕೀಲರು ರಣವೀರ್ ಸಿಂಗ್ ಯಾವಾಗ ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆಯಾಚಿಸ್ತಾರೆ ಎಂದು ಪ್ರಶ್ನೆ ಮಾಡಿದ್ರು. ಇದಕ್ಕೆ ರಣವೀರ್ ಪರ ವಕೀಲ ಸಜ್ಜನ್ ಪೂವಯ್ಯ ಸೆಕ್ಯೂರಿಟಿ ಸಮಸ್ಯೆ ಇದೆ ಎಂದು ಹೇಳಿದ್ರು. ಪೊಲೀಸರ ಬದಲಾಗಿ ಖಾಸಗಿ ಬಾಡಿಗಾರ್ಡ್ ಇಟ್ಟುಕೊಂಡು ಬೆಟ್ಟಕ್ಕೆ ಹೋಗಿ ಎಂದಿದ್ದಕ್ಕೆ, ಕೋರ್ಟ್ ಬೇಸರ ವ್ಯಕ್ತ ಪಡಿಸಿದೆ. ರಾಜ್ಯ ಪೊಲೀಸರು ನೈಜ್ಯ ತನಿಖೆ ಮಾಡುವುದನ್ನು ಬಿಟ್ಟಿದ್ದಾರೆ. ಕೇವಲ ಲಿವ್ ಇನ್ ರಿಲೇಷನ್ ಶಿಪ್‌ ಹಿಂದೆ ಹೋಗ್ತಿದ್ದಾರೆ ಎಂದಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸುದೀರ್ಘವಾದ ವಿಚಾರಣೆ ನಡೆಸಿದ ನ್ಯಾಯಾಲಯ ಬೇಷರತ್ ಕ್ಷಮೆ ಸ್ವೀಕಾರ ಮಾಡಿ ಅರ್ಜಿ ಇತ್ಯರ್ಥಪಡಿಸಿದೆ. ಈ ಮೂಲಕ ಮುಜುಗರಕ್ಕೆ ಸಿಲುಕಿದ್ದ ರಣವೀರ್‌ಗೆ ರಿಲೀಫ್ ಸಿಕ್ಕಿದೆ.ಇದನ್ನೂ ಓದಿ ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ

Share This Article