ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಚಂದನ್ ಶೆಟ್ಟಿ

Public TV
1 Min Read

ಕೊಪ್ಪಳ: ರ‍್ಯಾಪರ್ ಹಾಗೂ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದಾರೆ.

ಚಂದನ್ ಶೆಟ್ಟಿ ಹೊಸಪೇಟೆಯಲ್ಲಿ ನೂತನ ಸಿನಿಮಾ ಪ್ರೊಡಕ್ಷನ್ ಹೌಸ್ ಓಪನಿಂಗ್‍ಗೆ ಬಂದಿದ್ದರು. ಈ ವೇಳೆ ಅವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಹನುಮ ಜನಿಸಿದ ನಾಡು ಎಂದೇ ಪ್ರಖ್ಯಾತಿ ಪಡೆದಿರುವ ಅಂಜನಾದ್ರಿ ಬೆಟ್ಟಕ್ಕೆ ಒಟ್ಟು 575 ಮೆಟ್ಟಿಲುಗಳಿದೆ. ಚಂದನ್ ಈ ಬೆಟ್ಟ ಹತ್ತಿ ಹನುಮನ ದರ್ಶನ ಪಡೆದಿದ್ದಾರೆ.

ಕಳೆದ ತಿಂಗಳಷ್ಟೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕೂಡ ಅಂಜನಾದ್ರಿ ಬೆಟ್ಟಗೆ ಭೇಟಿ ನೀಡಿ ಹನುಮನ ದರ್ಶನ ಪಡೆದಿದ್ದರು. ಅಂಜನಾದ್ರಿ ಬೆಟ್ಟಕ್ಕೆ ಈ ಹಿಂದೆ ಪ್ರಮುಖ ರಾಜಕಾರಣಿಗಳು ಹಾಗೂ ಸಿನಿಮಾ ಕಲಾವಿದರು ಗಳು ಭೇಟಿ ನೀಡಿದ್ದರು.

ಸೋಮವಾರ ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಶುಭ ಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು.

ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಸೋಮವಾರ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *