ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

Public TV
1 Min Read

ಟಿ ಮಹಾಲಕ್ಷ್ಮಿ (Mahalakshmi) ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ (Ravinder Chandrasekaran) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ (Marriage) ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ಊಟ ತಗೆದುಕೊಂಡು ಹೋದ ಬಟ್ಟಲು, ಡಬ್ಬಿಗಳನ್ನು ವಾಪಸ್ಸು ತರುವಂತೆ ಹೆಂಡತಿಗೆ ಕೇಳಿಕೊಂಡಿದ್ದಾರೆ. ಅವುಗಳಿಗಾಗಿ ಅತ್ತೆ ಕಾಯುತ್ತಿರುತ್ತಾರೆ. ಯಾವುದೇ ಕಾರಣಕ್ಕೂ ಮಿಸ್ ಮಾಡದೇ ಎಲ್ಲವನ್ನೂ ತಗೆದುಕೊಂಡು ಬಾ ಎಂದು ಸೋಷಿಯಲ್ ಮೀಡಿಯಾ ಮೂಲಕವೇ ಹೆಂಡತಿಗೆ ಹೇಳಿದ್ದಾರೆ. ಆ ಒಂದು ದಿನ ಫುಡ್ ಡೆಲಿವರಿ ಬಾಯ್ (Delivery Boy) ಆದ ಅನುಭವನ್ನು ರವೀಂದರ್ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *