ಮುಂಬೈ ವಿಕ್ಟರಿ ಪರೇಡ್‌ ಉಲ್ಲೇಖಿಸಿ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಡಿಎನ್‌ಎ

Public TV
2 Min Read

– ಕೆಎಸ್‌ಸಿಎ ಅನುಮತಿ ನೀಡಿದ್ದರಿಂದ ಪೋಸ್ಟ್‌
– ಕೇವಲ ಆಟಗಾರರನ್ನು ತರುವುದು ಮಾತ್ರ ನಮ್ಮ ಕೆಲಸ
– ಕ್ಷಣ ಕ್ಷಣದ ಪ್ಲಾನ್ ರೂಪಿಸಿದ್ದು ಸಿಎಸ್‌

ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ನಡೆದ ಆರ್‌ಸಿಬಿ (RCB) ಆಟಗಾರರ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರವೇ (Karnataka Government) ಆಯೋಜಿಸಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತ (Stampede) ಸಂಭವಿಸಿದೆ ಎಂದು ಆರ್‌ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ (DNA) ಸಂಸ್ಥೆ ಹೈಕೋರ್ಟ್‌ಗೆ ಹೇಳಿದೆ.

11 ಮಂದಿ ಕಾಲ್ತುಳಿತಕ್ಕೆ ಸಂಬಂಧಿಸಿದ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಹಾಗೂ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಿವೆ. ಇದರಲ್ಲಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಲಾಗಿದೆ. ಕಾಲ್ತುಳಿತ ಸಂಭವಿಸಲು ಸರ್ಕಾರವೇ ಕಾರಣ ಎಂದು ನೇರವಾಗಿ ದೂರಲಾಗಿದೆ.

ಡಿಎನ್‌ಎ ಆರೋಪ ಏನು?
ಈ ಹಿಂದೆ ಭಾರತ ಟಿ-20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ವಿಕ್ಟರಿ ಪರೇಡ್ ನಡೆಸಲಾಗಿತ್ತು. 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೇಡೆ ಸ್ಟೇಡಿಯಂ ಸಾಮರ್ಥ್ಯ 32,000 ಇದ್ದರೂ ಸಮಸ್ಯೆ ಆಗಲಿಲ್ಲ. ಜೂ.3 ರಂದೇ ಆರ್‌ಸಿಬಿ ವಿಕ್ಟರಿ ಪರೇಡ್‌ಗೆ ಅನುಮತಿ ಕೋರಿ ಪತ್ರವನ್ನು ಬರೆಯಲಾಗಿತ್ತು. ಆದರೆ ತೆರೆದ ಬಸ್ ಪರೇಡ್‌ಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರು. ಇದನ್ನೂ ಓದಿ: ಜಾತ್ರೆಯಲ್ಲಿ ಲವ್‌… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ

ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ನಿಯೋಜನೆ ಮಾಡದ ಕಾರಣ ಡಿಎನ್‌ಎನಿಂದಲೇ 584 ಖಾಸಗಿ ಸಿಬ್ಬಂದಿ ನೇಮಕ ಮಾಡಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ.

ಘಟನೆ ದಿನ ಪೊಲೀಸರಿಗೆ 2,450 ಆಹಾರ ಪೊಟ್ಟಣ ಸಿದ್ದಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿದ್ದ ಕಾರಣ ಮಧ್ಯಾಹ್ನ 600 ಮಂದಿ ಮಾತ್ರ ಆಹಾರ ಪೊಟ್ಟಣ ಸ್ವೀಕರಿಸಿದ್ದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಪೊಟ್ಟಣ ಸ್ವೀಕರಿಸಿದ್ದರು. ಮಧ್ಯಾಹ್ನ 3:30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಹೆಚ್ಚಿತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ. ಇದನ್ನೂ ಓದಿ: ಹೆಂಡತಿ ಮಾತು ಕೇಳಿ ನನ್ನ ಮಗ ಹನಿಮೂನ್‌ಗೆ 10 ಲಕ್ಷ ಮೌಲ್ಯ‌ದ ಆಭರಣ ಹಾಕ್ಕೊಂಡು ಹೋಗಿದ್ದ: ಸೊಸೆಯ ಪ್ಲ್ಯಾನ್‌ ಬಗ್ಗೆ ಬಿಚ್ಚಿಟ್ಟ ಅತ್ತೆ

ಸರ್ಕಾರ ಮತ್ತು ಕೆಎಸ್‌ಸಿಎ ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್‌ ಮಾಡಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿ ಕ್ಷಣ ಕ್ಷಣದ ಪ್ಲಾನ್ ರೂಪಿಸಿದ್ದರು. ವಿಜಯೋತ್ಸವದಲ್ಲಿ ಭಾಗಿಯಾಗುವಂತೆ ಸರ್ಕಾರವೇ ಕರೆ ನೀಡಿತ್ತು. ಇದರಿಂದಾಗಿ ಲಕ್ಷಾಂತರ ಜನ ವಿಧಾನಸೌಧಕ್ಕೆ ಬಂದು, ಸ್ಟೇಡಿಯಂಗೂ ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಆರ್‌ಸಿಬಿ ವಾದವೇನು?
ನಮಗೂ, ಈ ಕಾರ್ಯಕ್ರಮಕ್ಕೆ ಯಾವುದೇ ಸಂಬಂಧವಿಲ್ಲ. ಕೇವಲ ಆಟಗಾರರನ್ನು ಕರೆದು ತರುವುದಷ್ಟೇ ನಮ್ಮ ಕೆಲಸ. ಸರ್ಕಾರದ ಅನುಮತಿ ಪಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. ಜೂ.3ರಂದೇ ಅನುಮತಿ ಸಿಕ್ಕಿದ್ದೇ ಎಂದೇ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ(KSCA) ದೃಢೀಕರಿಸಿತ್ತು. ಕೆಎಸ್‌ಸಿಎ ಮಾಹಿತಿ ಆಧರಿಸಿಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ.

Share This Article