– ಮದ್ವೆಯಾಗೋದಾಗಿ ನಂಬಿಸಿ ಮೋಸ – ಸಿಎಂ ಯೋಗಿಗೂ ಅಧಿಕೃತ ದೂರು ನೀಡಿದ ಯುವತಿ
ಲಕ್ನೋ: ಐಪಿಎಲ್ನಲ್ಲಿ ರಿಂಕು ಸಿಂಗ್ನಿಂದ 5 ಸಿಕ್ಸರ್ ಹೊಡೆಸಿಕೊಂಡು ಕುಖ್ಯಾತಿ ಪಡೆದಿದ್ದ ಹಾಗೂ 2025ರ ಆವೃತ್ತಿಯಲ್ಲಿ ಆರ್ಸಿಬಿ ತಂಡವನ್ನ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್ ವೇಗಿ ಯಶ್ ದಯಾಳ್ (Yash Dayal) ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಹಾಗೆಯೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೂ ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಭಾರತ, ಪಾಕ್ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್ ಮ್ಯಾಚ್
#Breaking 🚨
SERIOUS ALLEGATION against RCB cricketer Yash Dayal.A woman has accused him of 5 years of emotional, mental & physical abuse under a false promise of marriage.
— Chats, photos & video calls submitted.
— FIR filed. #yashDayal pic.twitter.com/fz8fmrX6sZ— DR Yadav (@DrYadav5197) June 28, 2025
ಭಾವಿ ಸೊಸೆ ಎಂದು ಪರಿಚಯಿಸಿದ್ರು
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಸಿಎಂ ಹೆಲ್ಪ್ಲೈನ್ ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದು, ಅದರ ಸ್ಕ್ರೀನ್ಶಾಟ್ಗಳನ್ನು ಸಾಮಾಜಿಕ ಜಾಲತಾಣಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ನಲ್ಲಿ ಮಹಿಳೆ ದಯಾಳ್ ಜೊತೆಗಿನ ತನ್ನ ಫೋಟೋ ಸಹ ಹಂಚಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು, ದಯಾಳ್ ಮದುವೆಯಾಗುವುದಾಗಿ ನಂಬಿಸಿ ಭಾವನಾತ್ಮಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ತನ್ನನ್ನು ಶೋಷಿಸಿದ್ದಾರೆ. ಅಲ್ಲದೇ ದಯಾಳ್ ನನ್ನನ್ನು ನಿಮ್ಮ ಭಾವಿ ಸೊಸೆ ಎಂದು ಅವರ ಕುಟುಂಬಕ್ಕೆ ಪರಿಚಯಿಸಿ, ಆ ಬಳಿಕ ನನಗೆ ವಂಚಿಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 1st Test: ಮಿಂಚಿದ ಡಕೆಟ್- ಭಾರತದ ವಿರುದ್ಧ ಇಂಗ್ಲೆಂಡ್ಗೆ 5 ವಿಕೆಟ್ಗಳ ಜಯ
Serious allegations against Yash Dayal, this must be investigated & Justice must be prevailed 🙌 #yashDayal pic.twitter.com/PdyDiI2luv
— 𝗩eena Jain (@DrJain21) June 28, 2025
ಅನೇಕ ಮಹಿಳೆಯರೊಟ್ಟಿಗೆ ಸಂಬಂಧ
ದಯಾಳ್ ತನಗೆ ಮೋಸ ಮಾಡುತ್ತಿದ್ದಾನೆಂದು ತಿಳಿದ ತಕ್ಷಣ ನಾನು ಇದನ್ನು ಪ್ರತಿಭಟಿಸಿದೆ. ಇದರಿಂದ ನಾನು ದೈಹಿಕ ಹಿಂಸೆ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾಯಿತು. ದಯಾಳ್ ನನ್ನೊಂದಿಗೆ ಮಾತ್ರವಲ್ಲದೆ ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ. ಈ ಬಗ್ಗೆ ನಾನು ಜೂನ್ 14 ರಂದು ಮಹಿಳಾ ಸಹಾಯವಾಣಿಗೆ ಪ್ರಕರಣದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧವೂ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್ – ಇದು ತುಂಬಾ ಸ್ಪೆಷಲ್ ಅಂದ್ರು ಅಥಿಯಾ ಶೆಟ್ಟಿ